ADVERTISEMENT

ಜಮ್ಮು–ಕಾಶ್ಮೀರ: ಗಡಿಯಲ್ಲಿ ನುಸುಳುಕೋರರನ್ನು ಹಿಮ್ಮೆಟ್ಟಿಸಿದ ಸೇನೆ; ಯೋಧ ಹುತಾತ್ಮ

ಪಿಟಿಐ
Published 13 ಆಗಸ್ಟ್ 2025, 5:59 IST
Last Updated 13 ಆಗಸ್ಟ್ 2025, 5:59 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ಬುಧವಾರ ವಿಫಲಗೊಳಿಸಿದೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಸಮೀಪ ಭಯೋತ್ಪಾದಕರ ಒಳನುಸುಳುವಿಕೆಯನ್ನು ತಡೆಹಿಡಿದಿದ್ದಾರೆ.

ಕಾರ್ಯಾಚರಣೆ ಸಂದರ್ಭ ನಡೆದ ಗುಂಡಿನ ಚಕಮಕಿ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.