ADVERTISEMENT

ಕೇಜ್ರಿವಾಲ್ ಕ್ಷಮೆ ಕೋರಿದ ತರೂರ್

ಪಿಟಿಐ
Published 14 ಜನವರಿ 2020, 20:00 IST
Last Updated 14 ಜನವರಿ 2020, 20:00 IST
ಶಶಿ ತರೂರ್
ಶಶಿ ತರೂರ್   

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಮಾಡಿದ್ದ ಟ್ವೀಟ್‌ಗೆ ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಮಂಗಳವಾರ ಕ್ಷಮೆಯಾಚಿಸಿದ್ದಾರೆ.

ಕೇಜ್ರಿವಾಲ್ ಅವರು ‘ಜವಾಬ್ದಾರಿ ಇಲ್ಲದ ಅಧಿಕಾರ ಬಯಸುತ್ತಿದ್ದಾರೆ. ಇದು ನಪುಂಸಕರ ಅಧಿಕಾರ’ ಎಂದು ತರೂರ್ ಸೋಮವಾರ ರಾತ್ರಿ ಟ್ವೀಟ್ ಮಾಡಿದ್ದರು.

ತರೂರ್ ಹೇಳಿಕೆಗೆ ನೆಟಿಜನರಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಶಶಿ ಅವರು ತೃತೀಯಲಿಂಗಿಗಳ ಕ್ಷಮೆ ಕೋರಬೇಕೆಂದೂ ಹಲವರು ಒತ್ತಾಯಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.