ADVERTISEMENT

ಎನ್‌ಎಲ್‌ಎಸ್‌ಐಯು: ಸ್ಥಳೀಯರಿಗೆ ಮೀಸಲು ಪ್ರಶ್ನಿಸಿದ್ದ ಅರ್ಜಿ ವಜಾ

ಪಿಟಿಐ
Published 4 ಜುಲೈ 2020, 4:48 IST
Last Updated 4 ಜುಲೈ 2020, 4:48 IST
nationa law school 
nationa law school    

ನವದೆಹಲಿ: ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾದಲ್ಲಿ ಶೇ 25ರಷ್ಟು ಸ್ಥಾನಗಳನ್ನು ಸ್ಥಳೀಯರಿಗೆ ಮೀಸಲಾಗಿಡಲು ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ತಳ್ಳಿ ಹಾಕಿತು.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸುಬ್ರಮಣಿಯಂ ಪ್ರಸಾದ್‌ ಅವರನ್ನು ಒಳಗೊಂಡ ಪೀಠವು, ‘ ಮನವಿ ಮಾಡಲು ಕರ್ನಾಟಕದಲ್ಲಿ ಸಮರ್ಥ ನ್ಯಾಯಾಲಯ ಇದೆ ಮತ್ತು ವಿಶ್ವವಿದ್ಯಾಲಯವು ಅಲ್ಲಿಯೇ ಇರುವುದರಿಂದ ಈ ಅರ್ಜಿಯನ್ನು ವಜಾಗೊಳಿಸಲಾಗುವುದು’ ಎಂದು ಸ್ಪಷ್ಟಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT