ನವದೆಹಲಿ: ದೇಶದ ವಾಯವ್ಯ ಭಾಗದಲ್ಲಿ ಬೇಸಿಗೆ ಅವಧಿಯಲ್ಲಿ ಬೀಳುವ ಮಳೆ ಪ್ರಮಾಣ ಬುಧವಾರದಿಂದ ಕಡಿಮೆಯಾಗುತ್ತಿರುವುದು ಕಂಡು ಬಂತು.
ವಾಡಿಕೆಯಂತೆ ಸೆಪ್ಟೆಂಬರ್ 17ರಿಂದ ಬೇಸಿಗೆ ಕಾಲದ ಮಳೆ ಕ್ಷೀಣಿಸುತ್ತದೆ. ಆದರೆ, ಈ ಬಾರಿ ವಾಡಿಕೆ ದಿನಕ್ಕಿಂತ ಮೂರು ವಾರಗಳು ತಡವಾಗಿ ಮಳೆ ಬೀಳುವುದು ಕಡಿಮೆಯಾಗುತ್ತಿದೆ.
ಇದು ಕಳೆದ 60 ವರ್ಷಗಳಲ್ಲಿ ಎರಡನೇ ಬಾರಿ ಇಷ್ಟು ತಡವಾಗಿ ನೈರುತ್ಯ ಮುಂಗಾರು ಕ್ಷೀಣಿಸಲು ಆರಂಭಿಸಿದ ವಿದ್ಯಮಾನ ದಾಖಲಾದಂತಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.