ADVERTISEMENT

ಆ್ಯಂಬುಲೆನ್ಸ್‌ ಸಂಚಾರಕ್ಕೆ ನಿರ್ಬಂಧ ಬೇಡ: ತೆಲಂಗಾಣ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 14 ಮೇ 2021, 18:52 IST
Last Updated 14 ಮೇ 2021, 18:52 IST

ಹೈದರಾಬಾದ್‌: ಕೋವಿಡ್‌–19 ರೋಗಿಗಳನ್ನು ಸಾಗಿಸುವ ನೆರೆಯ ರಾಜ್ಯಗಳ ಆ್ಯಂಬುಲೆನ್ಸ್‌ಗಳ ಸಂಚಾರಕ್ಕೆ ನಿರ್ಬಂಧ ವಿಧಿಸದಂತೆ ತೆಲಂಗಾಣ ಹೈಕೋರ್ಟ್‌ ಶುಕ್ರವಾರ, ತೆಲಂಗಾಣ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಾಲಯದ ಈ ಆದೇಶದಿಂದ ಕೋವಿಡ್‌–19 ರೋಗಿಗಳು ಅಲ್ಪಮಟ್ಟಿಗೆ ನಿರಾಳರಾಗಿದ್ದಾರೆ. ಪ್ರಮುಖವಾಗಿ ಆಂಧ್ರಪ್ರದೇಶದ ರೋಗಿಗಳು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಇದ್ದ ತೊಡಕು ನಿವಾರಣೆಯಾಗಿದೆ.

‘ಆಂಬ್ಯುಲೆನ್ಸ್‌ಗಳನ್ನು ತಡೆಯುವ ಹಕ್ಕನ್ನು ಯಾರು ನೀಡಿದ್ದಾರೆ’ ಎಂದು ತೆಲಂಗಾಣ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.