ADVERTISEMENT

ಕೇಂದ್ರ ಸರ್ಕಾರದಲ್ಲಿ ಒಬ್ಬನೇ ಒಬ್ಬ ರೈತ ಪ್ರತಿನಿಧಿಯೂ ಇಲ್ಲ: ಸಚಿನ್ ಪೈಲಟ್

ಪಿಟಿಐ
Published 10 ಜನವರಿ 2021, 14:36 IST
Last Updated 10 ಜನವರಿ 2021, 14:36 IST
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್   

ಜೈಪುರ (ರಾಜಸ್ಥಾನ): ಹೊಸ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಅಲ್ಲದೆ ಈ ವಿವಾದಿತ ಕಾನೂನು ಜಾರಿಗೆ ತರುವ ಮೊದಲು ರೈತರು ಅಥವಾ ಯಾವುದೇ ರಾಜ್ಯ ಸರ್ಕಾರಗಳ ಜೊತೆಗೆ ಕೇಂದ್ರವು ಚರ್ಚಿಸಿಲ್ಲ ಎಂದು ಆಪಾದಿಸಿದರು.

ಟೊಂಕ್‌ನಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಸಚಿನ್ ಪೈಲಟ್, ಕೇಂದ್ರ ಸರ್ಕಾರದಲ್ಲಿ ಒಬ್ಬನೇ ಒಬ್ಬ ರೈತ ಪ್ರತಿನಿಧಿಯೂ ಇಲ್ಲ ಮತ್ತು ರೈತರ ದುಃಸ್ಥಿತಿಯ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಆರೋಪಿಸಿದರು.

ADVERTISEMENT

ಆರ್ಥಿಕತೆಯು ಕುಸಿಯುತ್ತಿದೆ, ಪೆಟ್ರೋಲ್-ಡೀಸೆಲ್ ಬೆಲೆ ಗನನಕ್ಕೇರುತ್ತಿದೆ, ಸಿಲಿಂಡರ್ ಬೆಲೆ ಏರಿಕೆಯಾಗುತ್ತಿದೆ. ಹಣದುಬ್ಬರ ಹೆಚ್ಚಳವಾಗುತ್ತಿದೆ, ನಿರುದ್ಯೋಗ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರವು ರೈತರಿಗೆ ಹೊಡೆತ ನೀಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ಇದೇ ಮೊದಲ ಬಾರಿಗೆ ವಿವಿಧ ವಿರೋಧ ಪಕ್ಷಗಳು ಒಗ್ಗೂಡಿ, ಕೇಂದ್ರ ಸರ್ಕಾರ ರೈತ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತಿದೆ. ಇವುಗಳನ್ನು ಜಾರಿಗೆ ತರುವ ಮೊದಲು ಸರ್ಕಾರವು ರೈತರು ಅಥವಾ ಯಾವುದೇ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆ ನಡೆಸಿಲ್ಲ ಎಂದು ಆರೋಪಿಸಿದರು.

ಪಕ್ಷದ 'ಕಿಸಾನ್ ಬಚಾವೊ, ದೇಶ್ ಬಚಾವೊ' ಅಭಿಯಾನದಡಿಯಲ್ಲಿ ಸಚಿನ್ ಪೈಲಟ್, ಹಲವು ವೇದಿಕೆಗಳಲ್ಲಿ ರೈತರೊಂದಿಗೆ ಸಂವಾದ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.