ನವದೆಹಲಿ:ಜಮ್ಮು–ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ಪಾಕಿಸ್ತಾನದ ಪ್ರಚೋದನೆ ಮತ್ತು ಕುಮ್ಮಕ್ಕು ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಶ್ಮೀರ ವಿಷಯಕ್ಕೆ ಸಂಬಂಧಿಸಿ ಮಾಡಿದ ಟ್ವೀಟ್ನಲ್ಲಿ ಅವರು, ‘ಅನೇಕ ವಿಷಯಗಳಲ್ಲಿ ಈ ಸರ್ಕಾರವನ್ನು ನಾನು ಒಪ್ಪುವುದಿಲ್ಲ. ಆದರೆ ಈ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟ: ಕಾಶ್ಮೀರವು ಭಾರತದ ಆಂತರಿಕ ವಿಷಯ. ಪಾಕಿಸ್ತಾನವೂ ಸೇರಿದಂತೆ ಇತರ ಯಾವುದೇಶ ದೇಶಕ್ಕೂ ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅವಕಾಶವಿಲ್ಲ’ ಎಂದು ಉಲ್ಲೇಖಿಸಿದ್ದಾರೆ.
‘ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ವಿಷಯದಲ್ಲಿ ವಿಶ್ವದಾದ್ಯಂತ ಕುಖ್ಯಾತಿ ಪಡೆದಿರುವ ಪಾಕಿಸ್ತಾನವೇಜಮ್ಮು–ಕಾಶ್ಮೀರದಲ್ಲಿನ ಹಿಂಸಾಚಾರಕ್ಕೆ ಪ್ರಚೋದನೆ ಮತ್ತು ಕುಮ್ಮಕ್ಕು ನೀಡುತ್ತಿದೆ’ ಎಂದು ಇನ್ನೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.