ADVERTISEMENT

ರಾಮ ಜನ್ಮಭೂಮಿ ಸಂಕೀರ್ಣ ಸ್ಫೋಟಿಸಲು ಬೆದರಿಕೆ ಕರೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2023, 17:14 IST
Last Updated 2 ಫೆಬ್ರುವರಿ 2023, 17:14 IST

ಅಯೋಧ್ಯಾ, ಉತ್ತರ ಪ್ರದೇಶ (ಪಿಟಿಐ): ರಾಮಜನ್ಮಭೂಮಿ ಸಂಕೀರ್ಣ ಸ್ಫೋಟಿಸುವುದಾಗಿ ಅಯೋಧ್ಯಾ ನಿವಾಸಿಯೊಬ್ಬರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ರಾಮ್ಕೋಟ್ ಪ್ರದೇಶದ ನಿವಾಸಿ ಮನೋಜ್ ಅವರಿಗೆ ಕರೆ ಬಂದಿದ್ದು, ಈ ವಿಚಾರವನ್ನು ಅವರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಕರೆ ಮಾಡಿದ ವ್ಯಕ್ತಿ ಗುರುವಾರ ಬೆಳಿಗ್ಗೆ 10 ಗಂಟೆಗೆ ದೇವಾಲಯದ ಪ್ರದೇಶವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಅಪರಿಚಿತ ವ್ಯಕ್ತಿ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT