ADVERTISEMENT

ಆರ್‌ಎಸ್‌ಎಸ್‌ ಕಚೇರಿ ಸ್ಫೋಟಿಸುವ ಬೆದರಿಕೆ: ಬಿಗಿ ಬಂದೋಬಸ್ತ್‌

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2022, 21:30 IST
Last Updated 31 ಡಿಸೆಂಬರ್ 2022, 21:30 IST
   

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯನ್ನು ಬಾಂಬ್‌ ಇಟ್ಟು ಸ್ಪೋಟಿಸುವುದಾಗಿ ಅಜ್ಞಾತ ವ್ಯಕ್ತಿಯೊಬ್ಬರು ಶನಿವಾರ ಕರೆ ಮಾಡಿದ ಕಾರಣ ಅಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಪೊಲೀಸ್‌ ನಿಯಂತ್ರಣ ಕೊಠಡಿಗೆ ಮಧ್ಯಾಹ್ನ 1 ಗಂಟೆಗೆ ಈ ಕರೆ ಬಂದಿದೆ. ಮಹಲ್‌ ಪ್ರದೇಶದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಯನ್ನು ಬಾಂಬ್‌ ಮೂಲಕ ಸ್ಪೋಟಿಸುವುದಾಗಿ ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದ’ ಎಂದು ಡಿಸಿಪಿ ಗೋರಖ್‌ ಭಾಮ್ರೆ ತಿಳಿಸಿದ್ದಾರೆ.

ಬಾಂಬ್‌ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಸ್ಥಳಕ್ಕೆ ಕರೆಸಿ ಶೋಧ ನಡೆಸಲಾಯಿತು. ಆದರೆ ಅನುಮಾನಸ್ಪದ ವಸ್ತುಗಳು ಪತ್ತೆಯಾಗಲಿಲ್ಲ ಎಂದು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಹರೆ ಬಿಗಿಗೊಳಿಸಲಾಗಿದೆ. ಪೊಲೀಸರು ಕರೆಯ ಜಾಡು ಪತ್ತೆ ಹಚ್ಚುತ್ತಿದ್ದಾರೆ ಎಂದೂ ಡಿಸಿಪಿ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.