ADVERTISEMENT

ಜೆಎನ್‌ಯು ಮೇಲೆ ದಾಳಿ ಬೆದರಿಕೆ: ಇಬ್ಬರ ಬಂಧನ

ಪಿಟಿಐ
Published 15 ಆಗಸ್ಟ್ 2021, 11:52 IST
Last Updated 15 ಆಗಸ್ಟ್ 2021, 11:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಫೇಸ್‌ಬುಕ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿ ಸ್ವಾತಂತ್ರ್ಯ ದಿನದಂದು ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸುವ ಬೆದರಿಕೆಯೊಡ್ಡಿದ್ದ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ವಿಡಿಯೊದಲ್ಲಿ ಬೆದರಿಕೆ ಒಡ್ಡುತ್ತಿದ್ದ ವಿಕಾಸ್‌ ಸೆಹ್ರಾವತ್‌ (30) ಮತ್ತು ರಾಜಕುಮಾರ್‌ ಎಂದು ಗುರುತಿಸಲಾಗಿದೆ. ಇಬ್ಬರೂ ಉತ್ತಮ್‌ ನಗರ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

‘ವಿಡಿಯೊದಲ್ಲಿ ಮಾಜಿ ಶಾಸಕ, ದೆಹಲಿ ಕಾಂಗ್ರೆಸ್‌ ಮುಖಂಡ ಅಲ್ಕಾ ಲಂಬಾ ಅವರಿಗೆ ಅವಾಚ್ಯವಾಗಿ ನಿಂದಿಸಿದ ಆರೋಪದಡಿ ಬಂಧಿಸಲಾಗಿದೆ. ತಾನು 2018ರಿಂದ ವಿಶ್ವ ಹಿಂದೂ ಪರಿಷತ್‌ ಜೊತೆಗೆ ಗುರುತಿಸಿಕೊಂಡಿದ್ದೇನೆ ಎಂದೂ ಬಂಧಿತ ತಿಳಿಸಿದ್ದಾನೆ’ ಎಂದೂ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಆತನ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ. ಆದರೆ, ಜೆಎನ್‌ಯೂಗೂ ಸೆಹ್ರಾವತ್‌ನಿಗೂ ಸಂಬಂಧವಿಲ್ಲ. ಗಮನಸೆಳೆಯುವ ಉದ್ದೇಶದಿಂದ ಈ ವಿಡಿಯೊ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.