
ಪ್ರಜಾವಾಣಿ ವಾರ್ತೆ
ಚೆನ್ನೈ: ತಮಿಳುನಾಡಿನ ಕರಿಯಪಟ್ಟಿಯಲ್ಲಿಯ ಕಲ್ಲುಕ್ವಾರಿಯೊಂದರ ಉಗ್ರಾಣದಲ್ಲಿ ಬುಧವಾರ ಬೆಳಿಗ್ಗೆ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಈ ಉಗ್ರಾಣದಲ್ಲಿ ಕಲ್ಲುಗಳನ್ನು ಒಡೆಯಲು ಬಳಸುವ ಸ್ಫೋಟಕಗಳನ್ನು ಇರಿಸಲಾಗಿತ್ತು ಮತ್ತು ಇದು ಕ್ವಾರಿಗೆ ಸಮೀಪದಲ್ಲೇ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಎರಡು ವಾಹನಗಳು ಸಂಪೂರ್ಣವಾಗಿ ಹಾನಿಗೀಡಾಗಿವೆ. ಸ್ಫೋಟದ ಸದ್ದು 20 ಕಿಮೀ ದೂರದವರೆಗೂ ಕೇಳಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.