ADVERTISEMENT

ಪಂಜಾಬ್: ಗ್ರನೇಡ್ ದಾಳಿಗೆ ಮೂರು ಬಲಿ

ಏಜೆನ್ಸೀಸ್
Published 18 ನವೆಂಬರ್ 2018, 19:48 IST
Last Updated 18 ನವೆಂಬರ್ 2018, 19:48 IST
ಮೃತರ ಸಂಬಂಧಿಗಳ ರೋದನ
ಮೃತರ ಸಂಬಂಧಿಗಳ ರೋದನ   

ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ನಿರಂಕಾರಿ ಪಂಥದ ಪ್ರಾರ್ಥನಾ ಮಂದಿರದ ಮೇಲೆ ಭಾನುವಾರ ಗ್ರನೇಡ್ ದಾಳಿ ನಡೆದಿದೆ. ದಾಳಿಯಲ್ಲಿ ಮೂವರು ಮೃತಪಟ್ಟಿದ್ದು 15 ಜನರಿಗೆ ಗಾಯಗಳಾಗಿವೆ.

‘ಅಮೃತಸರದ ಹೊರವಲಯದಲ್ಲಿರುವ ನಿರಂಕಾರಿ ಭವನದಲ್ಲಿ ಧಾರ್ಮಿಕ ಸಭೆಯ ಕಾರಣಕ್ಕೆ ಭಕ್ತಾದಿಗಳು ಸೇರಿದ್ದರು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಸಭೆ ನಡೆಯುತ್ತಿದ್ದ ಆವರಣಕ್ಕೆ ಗ್ರನೇಡ್ ಎಸೆದಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ನಮಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಈವರೆಗೆ ಯಾರೂ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ತನಿಖೆ ನಡೆಯುತ್ತಿದೆ. ಹೀಗಾಗಿ ಹೆಚ್ಚಿನ ವಿವರ ನೀಡಲು ಸಾಧ್ಯವಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ನಿರಂಕಾರಿ ಭವನದಲ್ಲಿದ್ದ ಭಕ್ತಾದಿಗಳನ್ನು ದಾಳಿ ನಡೆದ ಕಾರಣ ತೆರವು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.