ADVERTISEMENT

ಹರಿಯಾಣ: ರಸ್ತೆ ಬದಿ ಮಲಗಿದ್ದವರ ಮೇಲೆ ಹರಿದ ಟ್ರಕ್- ಮೂವರ ಸಾವು

ಐಎಎನ್ಎಸ್
Published 19 ಮೇ 2022, 6:21 IST
Last Updated 19 ಮೇ 2022, 6:21 IST
   

ಗುರುಗ್ರಾಮ: ಕಲ್ಲಿದ್ದಲು ತುಂಬಿದ್ದ ಟ್ರಕ್ ರಸ್ತೆ ಬದಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಪರಿಣಾಮ ಮೂವರು ಮೃತಪಟ್ಟು, 11 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಝಜ್ಜಾರ್ ಜಿಲ್ಲೆಯ ಕುಂಡ್ಲಿ–ಮನೇಸರ್–ಪಲ್ವಾಲ್ ಎಕ್ಸ್‌ಪ್ರೆಸ್ ವೇ, ಆಸೋಡಾ ಟೋಲ್ ಪ್ಲಾಜಾ ಬಳಿ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ರೊಹ್ಟಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ನಡೆದಾಗ 18 ಮಂದಿ ರಸ್ತೆ ಬದಿ ಮಲಗಿದ್ದರು. ನಾಲ್ವರು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ADVERTISEMENT

ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಈ ಕಾರ್ಮಿಕರನ್ನು ರಸ್ತೆ ರಿಪೇರಿ ಕೆಲಸಕ್ಕೆ ನಿಯೋಜಿಸಲಾಗಿತ್ತು ಎಂದು ಡಿಸಿಪಿ ಶಕ್ತಿ ಸಿಂಗ್ ಹೇಳಿದ್ದಾರೆ.

ಮಲಗಲು ಜಾಗಕ್ಕಾಗಿ ರಸ್ತೆಯ ಒಂದು ಬದಿಯಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಆದರೆ, ರಭಸದಿಂದ ಡಿಕ್ಕಿ ಹೊಡೆದ ಟ್ರಕ್, ಮಲಗಿದ್ದವರ ಮೇಲೂ ಹರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.