ADVERTISEMENT

ಮಳೆಯಿಂದ ಮಣ್ಣು ಕುಸಿತ, ಶ್ರೀನಗರದಲ್ಲಿ ಮೂರು ಸಾವು

ಪಿಟಿಐ
Published 23 ಅಕ್ಟೋಬರ್ 2021, 11:39 IST
Last Updated 23 ಅಕ್ಟೋಬರ್ 2021, 11:39 IST
ಜಮ್ಮುವಿನಲ್ಲಿ ಸುರಿದ ಭಾರಿ ಮಳೆಯಲ್ಲಿ ಮಹಿಳೆಯೊಬ್ಬರು ಛತ್ರಿ ಹಿಡಿದು ರಸ್ತೆ ದಾಟಿದರು. ಪಿಟಿಐ ಚಿತ್ರ.
ಜಮ್ಮುವಿನಲ್ಲಿ ಸುರಿದ ಭಾರಿ ಮಳೆಯಲ್ಲಿ ಮಹಿಳೆಯೊಬ್ಬರು ಛತ್ರಿ ಹಿಡಿದು ರಸ್ತೆ ದಾಟಿದರು. ಪಿಟಿಐ ಚಿತ್ರ.   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮಣ್ಣು ಕುಸಿತ ಉಂಟಾಗಿ ಇಬ್ಬರು ಮಹಿಳೆಯರು ಸೇರಿ ಮೂವರು ಅಲೆಮಾರಿಗಳು ಮೃತಪಟ್ಟಿದ್ದಾರೆ.

ಮತ್ತೊಬ್ಬರು ಗಾಯಗೊಂಡಿದ್ದಾರೆ. ಭಾರಿ ಮಳೆಯಿಂದ ಟ್ರಾಲ್‌ನ ನೂರ್‌ಪೋರಾ ಪ್ರದೇಶದಲ್ಲಿ ಮಣ್ಣು ಕುಸಿದಿದೆ. ಜಮ್ಮುವಿನ ರಿಯಾಸಿ ಜಿಲ್ಲೆಗೆ ಸೇರಿದ ಅಲೆಮಾರಿಗಳ ಶಿಬಿರ ಮಣ್ಣಿನಲ್ಲಿ ಹೂತು ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣ್ಣಿನಡಿ ಸಿಲುಕಿದ್ದ ಒಬ್ಬರನ್ನು ರಕ್ಷಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ. ಶಿಬಿರದಲ್ಲಿದ್ದ ಇತರ ಮೂವರೂ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.