ADVERTISEMENT

ಜಮ್ಮು ಮತ್ತು ಕಾಶ್ಮೀರ: ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಐಎಎನ್ಎಸ್
Published 24 ನವೆಂಬರ್ 2021, 13:17 IST
Last Updated 24 ನವೆಂಬರ್ 2021, 13:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ರಾಮಭಾಗ್‌ನಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

'ಶ್ರೀನಗರಲ್ಲಿ ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಲಾಗಿದೆ. ಎನ್‌ಕೌಂಟರ್‌ಗೆ ಬಲಿಯಾದ ಉಗ್ರರ ಗುರುತು ಮತ್ತು ಯಾವ ಸಂಘಟನೆ ಜೊತೆ ಸೇರಿಕೊಂಡಿದ್ದರು ಎಂಬುದು ಪತ್ತೆಯಾಗಿಲ್ಲ' ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ನುಸುಳಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಭದ್ರತಾ ಪಡೆ ಪೊಲೀಸ್‌ ಪಡೆಯೊಂದಿಗೆ ಜಂಟಿ ಶೋಧ ಕಾರ್ಯಚರಣೆಗೆ ಇಳಿದಿತ್ತು. ಈ ಸಂದರ್ಭ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ನಡೆದಿತ್ತು.

ADVERTISEMENT

ಅಡಗಿದ್ದ ಉಗ್ರರು ಪೊಲೀಸರತ್ತ ಗುಂಡಿನ ಮಳೆಗರೆದಿದ್ದು, ಎನ್‌ಕೌಂಟರ್‌ ಮೂಲಕ ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.