ADVERTISEMENT

ನಿರ್ಭಯಾ: ಹೊಸದಾಗಿ ಡೆತ್‌ ವಾರಂಟ್ ಕೋರಿದ ಜೈಲು ಸಿಬ್ಬಂದಿ

ಪಿಟಿಐ
Published 6 ಫೆಬ್ರುವರಿ 2020, 13:26 IST
Last Updated 6 ಫೆಬ್ರುವರಿ 2020, 13:26 IST
   

ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ತಿಹಾರ್ ಜೈಲಿನ ಅಧಿಕಾರಿಗಳು ಹೊಸದಾಗಿ ಡೆತ್ ವಾರೆಂಟ್ ನೀಡುವಂತೆ ಕೋರಿ ದೆಹಲಿ ನ್ಯಾಯಾಲಯಕ್ಕೆ ಅರ್ಜಿಸಲ್ಲಿಸಿದ್ದಾರೆ.

ಅರ್ಜಿ ಸಲ್ಲಿಸಿದ ಬಳಿಕ, ದೆಹಲಿಯ ನ್ಯಾಯಾಲಯದ ಹೆಚ್ಚುವರಿ ಸೆಷೆನ್ಸ್ ನ್ಯಾಯಾಧೀಶ ಧರ್ಮೇಂದ್ರ ರಾಣಾ, ಈ ಕುರಿತು ನಾಲ್ವರು ಅಪರಾಧಿಗಳಿಂದ ಶುಕ್ರವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದ್ದಾರೆ.

ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವುದನ್ನು ವಿಚಾರಣಾ ನ್ಯಾಯಾಲಯ ಜನವರಿ 31ರಂದು ತಡೆ ಹಿಡಿದಿತ್ತು. ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್‌, ಪವನ್ ಗುಪ್ತ, ವಿನಯ್‌ಕುಮಾರ್ ಶರ್ಮಾ ಮತ್ತು ಅಕ್ಷಯ್ ಕುಮಾರ್ ಅವರನ್ನು ತಿಹಾರ್ ಜೈಲಿನಲ್ಲಿರಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.