ನವದೆಹಲಿ: ದೆಹಲಿ ಮೇಯರ್ ಸ್ಥಾನಕ್ಕೆ ಚುನಾವಣೆಯನ್ನು ಕಾಲಮಿತಿಯಲ್ಲಿ ನಡೆಸುವಂತೆ ಕೋರಿ ಎಎಪಿ ಮೇಯರ್ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಮೇಯರ್ ಮತ್ತು ಉಪಮೇಯರ್ ಆಯ್ಕೆ ಮಾಡಲು ಮಂಗಳವಾರ ದೆಹಲಿ ಮಹಾನಗರ ಪಾಲಿಕೆಯಲ್ಲಿ(ಎಂಸಿಡಿ) ಎರಡನೇ ಬಾರಿಗೆ ಸಭೆ ಕರೆಯಲಾಗಿತ್ತು. ಆ ಸಭೆಯಲ್ಲೂ ಗದ್ದಲ ಉಂಟಾದ ಕಾರಣ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೆನಾ ಅವರು ಮೇಯರ್ ಚುನಾವಣೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದ್ದರು.
ಒಬೆರಾಯ್ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎಂದು ಎಎಪಿ ನಾಯಕರು ತಿಳಿಸಿದ್ದಾರೆ.
ಬಿಜೆಪಿ ಸದಸ್ಯರು ಪುಂಡಾಟಿಕೆ ನಡೆಸುತ್ತಿದ್ದಾರೆ ಮತ್ತು ಎಂಸಿಡಿಯ ಕಲಾಪಗಳನ್ನು ತಡೆಯುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.