ADVERTISEMENT

ಎರಡು ವರ್ಷಗಳ ಬಳಿಕ ತಿರುಮಲ ಬ್ರಹ್ಮೋತ್ಸವ

​ಪ್ರಜಾವಾಣಿ ವಾರ್ತೆ
Published 12 ಜುಲೈ 2022, 1:23 IST
Last Updated 12 ಜುಲೈ 2022, 1:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಬಾದ್‌: ಕೋವಿಡ್‌ನಿಂದಾಗಿ ಎರಡು ವರ್ಷಗಳ ಬಳಿಕ ಶ್ರೀವಾರಿ ವಾರ್ಷಿಕ ಬ್ರಹ್ಮೋತ್ಸವ ನಡೆಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನಿರ್ಧರಿಸಿದೆ.

ತಿರುಮಲದಲ್ಲಿ ಸೋಮವಾರ ನಡೆದ ಆಡಳಿತ ಮಂಡಳಿ ಸಭೆ ಬಳಿಕ ಟಿಟಿಡಿ ಆಡಳಿತ ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಈ ನಿರ್ಧಾರ ಪ್ರಕಟಿಸಿದರು. 9 ದಿನಗಳ ಉತ್ಸವ ಸೆ. 27ರಿಂದ ಅ.5ರವರೆಗೆ ನಡೆಯಲಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರ ಕೋವಿಡ್‌ ಮಾರ್ಗಸೂಚಿ ಸಡಿಲಗೊಳಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಭಾಗವಹಿಸವಿಕೆಯೊಂದಿಗೆ ಅದ್ದೂರಿಯಾಗಿ ಉತ್ಸವ ನಡೆಸಲಾಗುವುದು ಎಂದು ರೆಡ್ಡಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.