ತಿರುಪತಿ: ಬೆಂಗಳೂರಿನ ಭಕ್ತರೊಬ್ಬರು ತಿರುಪತಿ ವೆಂಕಟೇಶ್ವರ ಅನ್ನ ಪ್ರಸಾದಂ ಟ್ರಸ್ಟ್ಗೆ ₹1 ಕೋಟಿ ದೇಣಿಗೆ ನೀಡಿದ್ದಾರೆ. ಇನ್ನೊಬ್ಬರು ಭಕ್ತರು ವೆಂಕಟೇಶ್ವರನಿಗೆ ವಜ್ರಖಚಿತ ಚಿನ್ನದ ಪದಕವನ್ನು ಕೊಡುಗೆಯಾಗಿ ನೀಡಿದ್ದಾರೆ.
ತಿರುಪತಿಯ ಉಚಿತ ಅನ್ನದಾನ ಕಾರ್ಯಕ್ರಮಕ್ಕೆ ಬೆಂಗಳೂರಿನ ಉದ್ಯಮಿ ಕಲ್ಯಾಣ ರಾಮನ್ ಕೃಷ್ಣಮೂರ್ತಿ ₹1 ಕೋಟಿ ಹಾಗೂ ಕೆ.ಎಂ. ಶ್ರೀನಿವಾಸ ಮೂರ್ತಿ 148 ಗ್ರಾಂ ತೂಕದ, ಅಂದಾಜು ₹25 ಲಕ್ಷ ಮೌಲ್ಯದ ಚಿನ್ನದ ಪದಕ ಕೊಡುಗೆಯಾಗಿ ನೀಡಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಪ್ರಕಟಣೆಯಲ್ಲಿ ತಿಳಿಸಿದೆ.
ತಿರುಮಲದಲ್ಲಿ ಟಿಟಿಡಿಯ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಯ್ಯ ಚೌಧರಿ ಅವರ ಮೂಲಕ ದೇಣಿಗೆ ಹಸ್ತಾಂತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.