
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ಹೈದರಾಬಾದ್: ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಿದ ಪ್ರಕರಣದಲ್ಲಿ ಟೆಂಡರ್ ನಿಯಾಮವಳಿಗಳನ್ನು ಸಡಿಲಗೊಳಿಸಿದ ಟಿಟಿಡಿ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳ ಲೋಪ ಪತ್ತೆಹಚ್ಚಿ ಶಿಸ್ತುಕ್ರಮಕ್ಕೆ ಸಲಹೆ ನೀಡುವ ಸಂಬಂಧ ನಿವೃತ್ತ ಮುಖ್ಯ ಕಾರ್ಯದರ್ಶಿ ದಿನೇಶ್ ಕುಮಾರ್ ನೇತೃತ್ವದಲ್ಲಿ ಆಂಧ್ರ ಪ್ರದೇಶ ಸರ್ಕಾರ ಏಕವ್ಯಕ್ತಿ ಸಮಿತಿ ರಚಿಸಿದೆ.
ಸಮಿತಿಯು ಟೆಂಡರ್ ನಿರ್ವಹಣೆಯಲ್ಲಿನ ಆಡಳಿತಾತ್ಮಕ ಲೋಪಗಳು, ನಿಯಾಮವಳಿಗಳನ್ನು ಅನುಸರಿಸಿದ ವಿಚಾರ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಸೂಚನೆ ನೀಡಲಿದೆ. 45 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಮಿತಿ ಸರ್ಕಾರ ಗಡುವು ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.