ಅಮರಾವತಿ: ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಾಲಯವಿರುವ ತಿರುಮಲದಲ್ಲಿ ಜಾರಿಯಲ್ಲಿರುವ ಮದ್ಯ ನಿಷೇಧವನ್ನು ತಿರುಪತಿ ನಗರಕ್ಕೂ ವಿಸ್ತರಿಸಬೇಕು ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯು ಒತ್ತಾಯಿಸಿದೆ. ಈ ವಿಚಾರದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಮಂಡಳಿಯು ನಿರ್ಧರಿಸಿದೆ.
‘ತಿರುಮಲದಲ್ಲಿ ಬಹಳ ಹಿಂದಿನಿಂದಲೇ ಮದ್ಯ ನಿಷೇಧ ಜಾರಿಯಲ್ಲಿದೆ. ಸಮೀಪದಲ್ಲಿಯೇ ಇರುವ ತಿರುಪತಿಯನ್ನು ದೇಗುಲ ನಗರಿ ಎಂದೇ ಪರಿಗಣಿಸಲಾಗುತ್ತದೆ. ಹಾಗಾಗಿ, ತಿರುಪತಿಯಲ್ಲಿಯೂ ಮದ್ಯ ನಿಷೇಧ ಹೇರಬೇಕು. ಹಾಗೆಯೇ, ತಿರುಮಲದ ಪರಿಸರವನ್ನು ರಕ್ಷಿಸಬೇಕು. ಅದಕ್ಕಾಗಿ ಸಂಕ್ರಾಂತಿಯ ಹೊತ್ತಿಗೆ ಇಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದೆ’ ಎಂದು ಮಂಡಳಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.