ಕೋಲ್ಕತ್ತ: ಸ್ಮಾರಕ, ಪ್ರತಿಮೆಗಳ ರಾಜಕಾರಣ ಮಾಡುತ್ತಿರುವ ಬಿಜೆಪಿಯು ಲೋಕಸಭಾ ಚುನಾವಣೆ ನಂತರ ಅದೇ ಒಂದು ಪ್ರತಿಮೆಯಾಗಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಿಷ್ಯ ನುಡಿದಿದ್ದಾರೆ.
ಬಿಜೆಪಿ ‘ಗೇಮ್ ಚೇಂಜರ್’ ಅಲ್ಲ, ‘ನೇಮ್ ಚೇಂಜರ್’ ರಾಜಕೀಯ ಪಕ್ಷ ಎಂದು ಅವರು ಲೇವಡಿ ಮಾಡಿದ್ದಾರೆ.
ಎನ್ಡಿಎ ಸರ್ಕಾರವು ಸಿಬಿಐ ಮತ್ತು ಆರ್ಬಿಐನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ನಾಶ ಮಾಡುತ್ತಿದೆ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.