ಕೋಲ್ಕತ್ತ: ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಇಂದು ಸಂಜೆ 7ಕ್ಕೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಖಡ್ ಅವರನ್ನು ಭೇಟಿ ಮಾಡಲಿದ್ದು, ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮನವಿ ಮಾಡಲಿದ್ದಾರೆ ಎಂದು ರಾಜ ಭವನದ ಮೂಲಗಳಿಂದ ತಿಳಿದು ಬಂದಿದೆ.
ಆಡಳತಾರೂಢ ಟಿಎಂಸಿ ಪಕ್ಷವು ವಿಧಾನಸಭೆ ಚುನಾವಣೆಲ್ಲಿ 292 ಸ್ಥಾನಗಳ ಪೈಕಿ 212 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರ ಉಳಿಸಿಕೊಂಡಿದ್ದಾರೆ. ಆದರೆ, ತೀವ್ರ ಜಿದ್ದಾಜಿದ್ದಿಯ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಸೋತಿದ್ದಾರೆ. ಒಂದು ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಆ ಕ್ಷೇತ್ರದಲ್ಲಿ ಟಿಎಂಸಿ ಮುನ್ನಡೆಯಲ್ಲಿದೆ.
77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಬಿಜೆಪಿಯು ಪ್ರಮುಖ ವಿರೋಧ ಪಕ್ಷವಾಗಿ ರೂಪುಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.