ADVERTISEMENT

ಸಂದೇಶ್‌ಖಾಲಿ: ಟಿಎಂಸಿಯಿಂದ ಶಹಜಹಾನ್‌ ಶೇಖ್‌ 6 ವರ್ಷ ಅಮಾನತು

ಏಜೆನ್ಸೀಸ್
Published 29 ಫೆಬ್ರುವರಿ 2024, 10:32 IST
Last Updated 29 ಫೆಬ್ರುವರಿ 2024, 10:32 IST
<div class="paragraphs"><p>ಶಹಜಹಾನ್‌ ಶೇಖ್‌</p></div>

ಶಹಜಹಾನ್‌ ಶೇಖ್‌

   

ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಪ್ರಕರಣದ ಮುಖ್ಯ ಆರೋಪಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮುಖಂಡ ಶಹಜಹಾನ್‌ ಶೇಖ್‌ನನ್ನು 6 ವರ್ಷಗಳ ವರೆಗೆ ಟಿಎಂಸಿಯಿಂದ ಅಮಾನತು ಮಾಡಲಾಗಿದೆ. 

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಸ್ಥಳೀಯರ ಭೂಮಿ ಕಬಳಿಸಿರುವ ಆರೋಪ ಶೇಖ್‌ ಮೇಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 55 ದಿನಗಳಿಂದ ತಲೆಮರೆಸಿಕೊಂಡಿದ್ದ ಶೇಖ್‌ನನ್ನು ಪಶ್ಚಿಮ ಬಂಗಾಳ ಪೊಲೀಸ್‌ ವಿಶೇಷ ಪಡೆಯು 'ಉತ್ತರ 24 ಪರಗಣ' ಜಿಲ್ಲೆಯಲ್ಲಿ ತಡರಾತ್ರಿ ಬಂಧಿಸಿದೆ.

ADVERTISEMENT

ಪೊಲೀಸರ್‌ ವಿಶೇಷ ತಂಡವು ಶೇಖ್‌  ಚಲನವಲನಗಳ ಮೇಲೆ ಹಲವು ದಿನಗಳಿಂದ ಕಣ್ಣಿಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಸಂಖ್ಯೆಯ ಮಹಿಳೆಯರು ಟಿಎಂಸಿ ನಾಯಕ ಹಾಗೂ ಆತನ ಬೆಂಬಲಿಗರು, ಬಲವಂತವಾಗಿ ತಮ್ಮ ಭೂಕಬಳಿಕೆ ಮಾಡಿದ್ದಾರೆ ಮತ್ತು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ್ದರು. ಅದಾದ ಬಳಿಕ, 'ಉತ್ತರ 24 ಪರಗಣ' ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

2019ರಲ್ಲಿ ನಡೆದ ಬಿಜೆಪಿಯ ಮೂವರು ಕಾರ್ಯಕರ್ತರ ಕೊಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಶೇಖ್‌, ಜನವರಿ 5ರಿಂದ ನಾಪತ್ತೆಯಾಗಿದ್ದರು.

ಶೇಖ್‌, ಪಡಿತರ ಅಕ್ರಮ ಹಾಗೂ ಭೂ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ನಡೆಸಿದ್ದಾರೆ ಎಂದು ಜಾರಿ ನಿರ್ದೇಶನಾಲಯವೂ ಪ್ರಕರಣ ದಾಖಲಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.