ADVERTISEMENT

‘ಎಚ್ಚರಿಕೆಯಿಂದಿರು ಮಹುವಾ...’ ಪದ್ಯ ಹಂಚಿಕೊಂಡ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜುಲೈ 2022, 7:20 IST
Last Updated 7 ಜುಲೈ 2022, 7:20 IST
ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾ   

ಕೊಲ್ಕತ್ತ: ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಗುರುವಾರ ತಮ್ಮ ಟ್ವಿಟ್ಟರ್‌ನಲ್ಲಿ ಪದ್ಯವೊಂದನ್ನು ಹಂಚಿಕೊಂಡಿದ್ದಾರೆ

‘ಎಚ್ಚರಿಕೆಯಿಂದಿರು, ಮೊಹುವಾ’ ಎಂಬ ಶೀರ್ಷಿಕೆಯ ಪದ್ಯವನ್ನು ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅದನ್ನು ‘ಭಾರತದ ನಾಗರಿಕರು ಬರೆದದ್ದು’ ಎಂದು ಕೊನೆಯಲ್ಲಿ ನಮೂದಿಸಲಾಗಿದೆ.

ಕಾಳಿ ದೇವಿಯ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲಿ ಮಹುವಾ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿವೆ.

ADVERTISEMENT

ಕಾಳಿ ದೇವಿ ಮಾಂಸ ತಿನ್ನುತ್ತಾಳೆ ಮತ್ತು ಮದ್ಯವನ್ನು ಸ್ವೀಕರಿಸುತ್ತಾಳೆ ಎಂದು ಮೊಯಿತ್ರಾ ಹೇಳಿದ್ದರು.

ಮೊಯಿತ್ರಾ ಅವರ ಹೇಳಿಕೆಯಿಂದ ಟಿಎಂಸಿ ಅಂತರ ಕಾಯ್ದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.