ADVERTISEMENT

‘ಎಐಎಡಿಎಂಕೆಗೆ ಶಶಿಕಲಾ ಸೇರ್ಪಡೆ ಇಲ್ಲ’

ಪಿಟಿಐ
Published 19 ಜನವರಿ 2021, 16:58 IST
Last Updated 19 ಜನವರಿ 2021, 16:58 IST
ಕೆ.ಪಳನಿಸ್ವಾಮಿ
ಕೆ.ಪಳನಿಸ್ವಾಮಿ   

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ತಮಿಳುನಾಡಿನಲ್ಲಿ ಬಿಜೆಪಿ ಜೊತೆ ಸೀಟು ಹಂಚಿಕೆ ವಿಚಾರವನ್ನು ಚುನಾವಣೆ ಅಧಿಸೂಚನೆ ಪ್ರಕಟವಾದ ಬಳಿಕ ಅಂತಿಮಗೊಳಿಸಲಾಗುವುದು ಎಂದು ತಿಳಿಸಿರುವ ತಮಿಳುನಾಡಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ, ಎಐಎಡಿಎಂಕೆಗೆ ವಿ.ಕೆ.ಶಶಿಕಲಾ ಸೇರ್ಪಡೆ ವಿಚಾರವನ್ನು ತಿರಸ್ಕರಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದಿಂದ ಶಶಿಕಲಾ ಅವರನ್ನು ಅಮ್ಮನೇ (ಜಯಲಲಿತಾ) ಹೊರಹಾಕಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT