ಚೆನ್ನೈ (ಪಿಟಿಐ): ತಮಿಳುನಾಡಿನಲ್ಲಿ 9, 10 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ಹಾಜರಾಗಬೇಕಾಗಿಲ್ಲ. ಈ ತರಗತಿಗಳ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ.
ಕೊರೊನಾ ವೈರಸ್ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ.
‘ವಿದ್ಯಾರ್ಥಿಗಳು, ಶಿಕ್ಷಕರು ಈ ವರ್ಷ ವಿಭಿನ್ನ ಪರಿಸ್ಥಿತಿ ಎದುರಿಸಿದ್ದಾರೆ. ಈ ಬಗ್ಗೆ ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು 2020–21ನೇ ಶೈಕ್ಷಣಿಕ ವರ್ಷದಲ್ಲಿನ 9,10 ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯದೆಯೇ ಉತ್ತೀರ್ಣಗೊಳಿಸಲಾಗಿದೆ’ ಎಂದು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ವಿಧಾನಸಭೆಯಲ್ಲಿ ಗುರುವಾರ ಪ್ರಕಟಿಸಿದ್ದಾರೆ.
‘ಕಳೆದ ವರ್ಷ ಮಾರ್ಚ್ 25ರಿಂದ ಮುಚ್ಚಲಾಗಿದ್ದ ಶಾಲೆಗಳನ್ನು ಪ್ರಸಕ್ತ ವರ್ಷದ ಜನವರಿ 19ರಂದು 10 ಮತ್ತು 12ನೇ ತರಗತಿಗಳಿಗೆ ಮಾತ್ರ ತೆರೆಯಲಾಗಿತ್ತು. ಈ ವರ್ಷ ಪಠ್ಯಕ್ರಮವನ್ನು ಸಹ ಕಡಿತಗೊಳಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.