ಚೆನ್ನೈ: ಓಮೈಕ್ರಾನ್ ಒಳಗೊಂಡಂತೆ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಮತ್ತಷ್ಟು ಕಠಿಣ ನಿರ್ಬಂಧ ಹೇರಲಾಗಿದೆ.
ನಾಳೆಯಿಂದ (ಜ.6, ಗುರುವಾರ) ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ಕರ್ಫ್ಯೂ ಹಾಗೂ ಭಾನುವಾರ (ಜ.9) ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ಕುರಿತು ಘೋಷಣೆ ಮಾಡಿದ್ದಾರೆ.
ಬಸ್, ಉಪನಗರ ರೈಲು ಮತ್ತು ಮೆಟ್ರೊ ರೈಲುಗಳಲ್ಲಿ ಪ್ರಯಾಣಿಕರ ಸಂಚಾರವನ್ನು ಶೇ 50ಕ್ಕೆ ಮಿತಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
'ಪೊಂಗಲ್' ಹಬ್ಬದ ಪ್ರಯುಕ್ತ ನಡೆಯಬೇಕಿದ್ದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನುಮುಂದೂಡಲಾಗಿದೆ.
ಶುಕ್ರವಾರ, ಶನಿವಾರ ಮತ್ತು ಭಾನುವಾರದಂದುಪ್ರಾರ್ಥನಾ ಮಂದಿರಗಳಲ್ಲಿ ಸಾರ್ವಜನಿಕರಪ್ರವೇಶಕ್ಕೆ ಅವಕಾಶಇರುವುದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.