ADVERTISEMENT

ಎಸ್‌ಎಸ್‌ಎಸ್‌ ಅನುದಾನ ತಡೆ: ‘ಸುಪ್ರೀಂ’ ಮೊರೆಹೋದ ತಮಿಳುನಾಡು

ಪಿಟಿಐ
Published 21 ಮೇ 2025, 16:03 IST
Last Updated 21 ಮೇ 2025, 16:03 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಮತ್ತು ‘ಪಿಎಂಶ್ರೀ’ ಯೋಜನೆ ಅನುಷ್ಠಾನ ಮಾಡದ ಕಾರಣಕ್ಕೆ ಸಮಗ್ರ ಶಿಕ್ಷಣ ಯೋಜನೆಯಡಿ (ಎಸ್‌ಎಸ್‌ಎಸ್‌) ಅನುದಾನ ತಡೆಹಿಡಿದಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಕೇಂದ್ರ ಸರ್ಕಾರವು ₹2,151.59 ಕೋಟಿ ಮೂಲ ಮೊತ್ತ ಬಿಡುಗಡೆ ಮಾಡಬೇಕಿದ್ದು, ಅದಕ್ಕೆ ಶೇ 6ರ ಬಡ್ಡಿಯೊಂದಿಗೆ ₹2,291.30 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ನಿರ್ದೇಶಿಸಲು ಅರ್ಜಿಯಲ್ಲಿ ಕೋರಲಾಗಿದೆ.

ಸಮಗ್ರ ಶಿಕ್ಷಣ ಯೋಜನೆಯಡಿಯಲ್ಲಿ ಅನುದಾನ ಪಡೆಯಲು ಎನ್‌ಇಪಿ–2020 ಮತ್ತು ಪಿಎಂಶ್ರೀ ಯೋಜನೆ ಜಾರಿಗೊಳಿಸಬೇಕು ಎಂಬ ಕೇಂದ್ರದ ನಿರ್ಧಾರವು ಸಂವಿಧಾನಬಾಹಿರ, ಕಾನೂನುಬಾಹಿರ ಮತ್ತು ಅಸಮಂಜಸ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.