ADVERTISEMENT

ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಪಿಟಿಐ
Published 5 ಅಕ್ಟೋಬರ್ 2025, 15:28 IST
Last Updated 5 ಅಕ್ಟೋಬರ್ 2025, 15:28 IST
.
.   

ನವದೆಹಲಿ: ಕಲೈನಾರ್‌ ವಿಶ್ವವಿದ್ಯಾಲಯ ಮಸೂದೆ–2025ಕ್ಕೆ ಅನುಮೋದನೆ ನೀಡದೆ ವಿಳಂಬ ಮಾಡುತ್ತಿರುವ ರಾಜ್ಯಪಾಲರ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

‘ಮಸೂದೆ ಕುರಿತ ನಿರ್ಧಾರವನ್ನು ಪ್ರಕಟಿಸಲು ನಿರ್ದೇಶನ ನೀಡುವಂತೆ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಜೊತೆಗೆ, ಸಚಿವ ಸಂಪುಟದ ಸಲಹೆಯ ಅನುಸಾರ ಮತ್ತು ಸಂವಿಧಾನದ 200ನೇ ವಿಧಿಯ ಪ್ರಕಾರ ನಡೆದುಕೊಳ್ಳುವಂತೆ ರಾಜ್ಯಪಾಲರಿಗೆ ಸೂಚಿಸುವಂತೆಯೂ ತಿಳಿಸಿದೆ.

ರಾಜ್ಯ ವಿಧಾನಸಭೆಯು ಅಂಗೀಕರಿಸಿರುವ ಮಸೂದೆಯನ್ನು ರಾಷ್ಟ್ರಪತಿಗಳ ಪರಿಶೀಲನೆಗಾಗಿ ರಾಜ್ಯಪಾಲ ಆರ್‌.ಎನ್‌.ರವಿ ಅವರು ಕಾಯ್ದಿರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.