ADVERTISEMENT

ಟೂಲ್‌ಕಿಟ್‌ ಪ್ರಕರಣದ ಆರೋಪಿ ಶಾಂತನು ಮುಲುಕ್‌ಗೆ ಬಂಧನದಿಂದ ರಕ್ಷಣೆ

ಪಿಟಿಐ
Published 25 ಫೆಬ್ರುವರಿ 2021, 6:15 IST
Last Updated 25 ಫೆಬ್ರುವರಿ 2021, 6:15 IST
ಶಾಂತನು ಮುಲುಕ್‌
ಶಾಂತನು ಮುಲುಕ್‌   

ನವದೆಹಲಿ: ಟೂಲ್‌ಕಿಟ್‌ ಪ್ರಕರಣದ ಆರೋಪಿ ಶಾಂತನು ಮುಲುಕ್‌ಗೆ ದೆಹಲಿ ನ್ಯಾಯಾಲಯವು ಗುರುವಾರ ಬಂಧನದಿಂದ ರಕ್ಷಣೆ ನೀಡಿದೆ.

‘ಶಾಂತನು ಮುಲುಕ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತಾಗಿ ಪ್ರತಿಕ್ರಿಯಿಸುವುದಕ್ಕೂ ಮುನ್ನ ‌‌ಈ ಬಗ್ಗೆ ತನಿಖೆ ನಡೆಸಲು ಹೆಚ್ಚಿನ ಸಮಯ ಅವಕಾಶ ಬೇಕು’ ಎಂದು ದೆಹಲಿ ಪೊಲೀಸರು ಕೇಳಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಮಾರ್ಚ್‌ 9ರ ವರೆಗೆ ಶಾಂತನು ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ.

‘ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆ ಮಾರ್ಚ್‌ 9 ರಂದು ನಡೆಸಲಾಗುವುದು. ಅಲ್ಲಿಯವರೆಗೆ ಪೊಲೀಸರು ಶಾಂತನು ಅವರನ್ನು ಬಂಧಿಸಬಾರದು’ ಎಂದು ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಧರ್ಮೇಂದರ್‌ ರಾಣಾ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.