ADVERTISEMENT

ಪೊಲೀಸರು, ಕೌನ್ಸಿಲರ್‌ಗಳನ್ನು ಕೊಂದಿದ್ದ ಭಯೋತ್ಪಾದಕ ಎನ್‌ಕೌಂಟರ್‌ಗೆ ಬಲಿ

ಪಿಟಿಐ
Published 21 ಜೂನ್ 2021, 3:51 IST
Last Updated 21 ಜೂನ್ 2021, 3:51 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಎಂಬಲ್ಲಿ ಭದ್ರತಾಪಡೆಗಳು ಮತ್ತು ಭಯೋತ್ಪಾದಕರ ನಡುವೆ ಸೋಮವಾರ ನಸುಕಿನಲ್ಲಿ ಗುಂಡಿನ ಚಕಮಕಿ ನಡೆದಿದೆ. ಭದ್ರತಾಪಡೆಗಳ ಗುಂಡೇಟಿಗೆ ಲಷ್ಕರ್‌ ಎ ತಯ್ಬಾದ ಮುದಾಸಿರ್‌ ಪಂಡಿತ್‌ ಸೇರಿ ಮೂವರು ಉಗ್ರರು ಬಲಿಯಾಗಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆಯ ಸೊಪೋರ್‌ನ ಗುಂಡ್ ಬ್ರಾತ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಲಷ್ಕರ್‌ ಎ ತಯ್ಬಾ ಸಂಘಟನೆಯ ಪ್ರಮುಖ ಮುದಾಸಿರ್‌ ಪಂಡಿತ್‌ ಸೇರಿ ಮೂವರು ಉಗ್ರರು ಘಟನೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಕಾಶ್ಮೀರ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ತಿಳಿಸಿದ್ದಾರೆ.

ಪಂಡಿತ್‌, ಇತ್ತೀಚೆಗೆ ಮೂವರು ಪೊಲೀಸರು, ಇಬ್ಬರು ಬಿಜೆಪಿ ಕೌನ್ಸಿಲರ್‌ಗಳು ಮತ್ತು ಇಬ್ಬರು ನಾಗರಿಕರನ್ನು ಕೊಲೆ ಮಾಡಿದ್ದ ಎಂದು ಜಮ್ಮು ಕಾಶ್ಮೀರದ ಐಜಿಪಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಗುಂಡ್‌ ಬ್ರಾತ್‌ನಲ್ಲಿ ಪಂಡಿತ್ ಸೇರಿದಂತೆ ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಭಾನುವಾರ ರಾತ್ರಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.