ADVERTISEMENT

03 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

ಪ್ರಜಾವಾಣಿ ವಿಶೇಷ
Published 3 ಫೆಬ್ರುವರಿ 2026, 14:52 IST
Last Updated 3 ಫೆಬ್ರುವರಿ 2026, 14:52 IST
<div class="paragraphs"><p>ಮುಖ 10 ಸುದ್ದಿಗಳು</p></div>

ಮುಖ 10 ಸುದ್ದಿಗಳು

   

ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.

ಸಿದ್ದಾಪುರದ ವಸಂತ ನಾಯ್ಕ ಕೊಲೆ: ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಬಂಧನ

ಕಾರವಾರ/ಸಿದ್ದಾಪುರ: ಸಿದ್ದಾಪುರ ತಾಲ್ಲೂಕಿನ ಅವರಗೊಪ್ಪ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ವಸಂತ ನಾಯ್ಕ (43) ಎಂಬುವವರ  ಹತ್ಯೆ ನಡೆದಿದೆ. ಹತ್ಯೆ ಆರೋಪಿಗಳಾದ ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಸೇರಿ ಏಳು ಮಂದಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಮೋದಿ ಮೇಲಿರುವ ಆ ಎರಡು ಒತ್ತಡದ ಕಾರಣಕ್ಕೆ ಅಮೆರಿಕ ಒಪ್ಪಂದಕ್ಕೆ ಸಹಿ: ರಾಗಾ ಆರೋಪ

ನವದೆಹಲಿ: ‘ನರೇಂದ್ರ ಮೋದಿ ಭಯಭೀತರಾಗಿದ್ದಾರೆ. ಅವರ ಮೇಲಿದ್ದ ಎರಡು ಒತ್ತಡಗಳಿಂದಾಗಿ ಭಾರತ ಹಾಗೂ ಅಮೆರಿಕ ಒಪ್ಪಂದಕ್ಕೆ ಸಹಿ ಮಾಡಿದ್ದಾರೆ’ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದರು.

ಲೋಕಸಭೆಯಲ್ಲಿ ಭಾರಿ ಕೋಲಾಹಲ: ವಿರೋಧ ‍ಪಕ್ಷದ 8 ಸಂಸದರ ಅಮಾನತು

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಲಡಾಖ್‌ ಬಿಕ್ಕಟ್ಟಿನ ಬಗ್ಗೆ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪ್ರಸ್ತಾಪಿಸಿದ ವಿಷಯ ಇಂದೂ (ಮಂಗಳವಾರ) ಸಹ ಭಾರಿ ಕೋಲಾಹಲಕ್ಕೆ ಕಾರಣವಾಯಿತು.

ಗೆಲುವುಗಳಿಂದ ತೃಪ್ತರಾಗದೆ ಕೆಲಸ ಮುಂದುವರಿಸಿ: NDA ನಾಯಕರಿಗೆ ಪ್ರಧಾನಿ ಮೋದಿ ಸಲಹೆ

ನವದೆಹಲಿ: ಎನ್‌ಡಿಎ ವಿವಿಧ ಚುನಾವಣೆಗಳಲ್ಲಿ ನಿರಂತರ ಜಯ ಸಾಧಿಸುತ್ತಿರುವುದಕ್ಕೆ ಜನಪರ ನೀತಿಗಳು ಹಾಗೂ ಪರಿಶ್ರಮವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಿಳಿಸಿದ್ದಾರೆ.

ಜನರ ಖಾಸಗಿತನದ ಹಕ್ಕು ಉಲ್ಲಂಘಿಸಲು ಬಿಡೆವು: ವಾಟ್ಸ್‌ಆ್ಯಪ್‌ಗೆ ಸುಪ್ರಿಂ ಕೋರ್ಟ್

ನವದೆಹಲಿ: ದತ್ತಾಂಶ ಹಂಚಿಕೆ ಹೆಸರಿನಲ್ಲಿ ಪ್ರಜೆಗಳ ಖಾಸಗಿತನದ ಹಕ್ಕಿನೊಂದಿಗೆ ಆಟವಾಡಕೂಡದು ಎಂದು ಸುಪ್ರೀಂ ಕೋರ್ಟ್ ಕುಟುವಾಗಿ ನುಡಿದಿದೆ.‌‌

ವಿದೇಶಿಗರ ಅಕ್ರಮ ಠಿಕಾಣಿ: ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದ ಹೈಕೋರ್ಟ್‌

ಬೆಂಗಳೂರು: ‘ಮಾನ್ಯತೆ ಹೊಂದಿದ ವೀಸಾ, ಪಾಸ್‌ಪೋರ್ಟ್‌ ಇಲ್ಲದೆ ಅಕ್ರಮವಾಗಿ ನೆಲೆಸಿರುವ ವಿದೇಶಿಯರಿಂದ ದೇಶದ ಭದ್ರತೆಗೆ ಅಪಾಯ ಕಾದಿದೆ’ ಎಂದು ಹೈಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ.

ಭಾರತ-ಅಮೆರಿಕ ಒಪ್ಪಂದವು ಆರ್ಥಿಕ ಅನಿಶ್ಚಿತತೆ ಕೊನೆಗೊಳಿಸಿದೆ: ಹಣಕಾಸು ಸಚಿವಾಲಯ

ನವದೆಹಲಿ: ಭಾರತ ಹಾಗೂ ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಘೋಷಣೆಯು ಜಾಗತಿಕವಾಗಿ ಆರ್ಥಿಕತೆಯ ಮೇಲೆ ಉಂಟಾಗಿದ್ದ ಅನಿಶ್ಚಿತತೆಯ ವಾತಾವರಣವನ್ನು ಕೊನೆಗೊಳಿಸಿದೆ. ಮಾತ್ರವಲ್ಲ, ಭಾರತೀಯ ಆರ್ಥಿಕತೆಗೆ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಹಣಕಾಸು ಸಚಿವಾಲಯದ ಉನ್ನತ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ತೈಲ ಖರೀದಿಸುವುದನ್ನು ನಿಲ್ಲಿಸುವ ಬಗ್ಗೆ ಭಾರತ ಯಾವುದೇ ಮಾಹಿತಿ ನೀಡಿಲ್ಲ: ರಷ್ಯಾ

ಮಾಸ್ಕೊ: ತೈಲ ಖರೀದಿಸುವುದನ್ನು ನಿಲ್ಲಿಸುವ ಬಗ್ಗೆ ಭಾರತದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ವಕ್ತಾರ ಡಿಮಿಟ್ರಿ ಪೆಸ್ಕೋವ್ ತಿಳಿಸಿದ್ದಾರೆ.

ಯಾವುದೇ ತಂಡಕ್ಕೆ ಭಾರತದ ವಿರುದ್ಧ ಗೆಲುವು ಸುಲಭವಲ್ಲ: ಆಸೀಸ್ ಮಾಜಿ ಆಟಗಾರ

ವಡೋದರಾ: ಫೆಬ್ರುವರಿ 7ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ಗಳನ್ನು ಸೋಲಿಸುವುದು ಸುಲಭವಲ್ಲ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ ಹಾಗೂ ಗುಜರಾತ್ ಜೈಂಟ್ಸ್ ತಂಡದ ಕೋಚ್ ಮೈಕೆಲ್ ಕ್ಲಿಂಗರ್ ಹೇಳಿದ್ದಾರೆ.

ಬಿಹಾರ: ವಿಧಾನಸಭೆಗೆ ಜೈಲು ವಾಹನದಲ್ಲೇ ಬಂದ ಶಾಸಕ ಅನಂತ್ ಕುಮಾರ್ ಸಿಂಗ್!

ಪಟ್ನಾ: ಮಾಜಿ ಭೂಗತ ದೊರೆ, ಹಾಲಿ ಜೆಡಿ(ಯು) ಶಾಸಕ ಅನಂತ್ ಕುಮಾರ್ ಸಿಂಗ್ ಅವರನ್ನು ಬಿಹಾರ ವಿಧಾನಸಭೆಗೆ ಮಂಗಳವಾರ ಜೈಲು ವಾಹನದಲ್ಲೆ ಕರೆತರಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.