ADVERTISEMENT

2026ರ ಫೆಬ್ರುವರಿ 24: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಫೆಬ್ರುವರಿ 2026, 5:38 IST
Last Updated 24 ಫೆಬ್ರುವರಿ 2026, 5:38 IST
<div class="paragraphs"><p>ಈ ದಿನದ ಪ್ರಮುಖ 10 ಸುದ್ದಿಗಳು</p></div>

ಈ ದಿನದ ಪ್ರಮುಖ 10 ಸುದ್ದಿಗಳು

   

ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಭಾರತದಿಂದ ಅಮೆರಿಕ ಪ್ರವೇಶಿಸುವ ಸರಕುಗಳ ಮೇಲೆ ಇಂದಿನಿಂದ ಶೇ 10ರಷ್ಟು ಸುಂಕ ಜಾರಿ

ನವದೆಹಲಿ: ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇ 10ರಷ್ಟು ಹೆಚ್ಚುವರಿ ಸುಂಕವು ಮಂಗಳವಾರದಿಂದ ಜಾರಿಗೆ ಬರಲಿದೆ. ಈ ಆದೇಶವು 150 ದಿನಗಳವರೆಗೆ ಜಾರಿಯಲ್ಲಿ ಇರಲಿದೆ.

ADVERTISEMENT

ಉಗ್ರರ ನಿಗ್ರಹಕ್ಕೆ ‘ಪ್ರಹಾರ್’: ಹೊಸ ನೀತಿ ಅನಾವರಣಗೊಳಿಸಿದ ಗೃಹ ಸಚಿವಾಲಯ

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳನ್ನು ಹತ್ತಿಕ್ಕಲು ಮತ್ತು ಉಗ್ರರ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುವ ಕಾರ್ಯತಂತ್ರ ಒಳಗೊಂಡ ದೇಶದ ಮೊತ್ತಮೊದಲ ಭಯೋತ್ಪಾದಕ ನಿಗ್ರಹ ನೀತಿ ‘ಪ್ರಹಾರ್‌’ ಅನ್ನು ಕೇಂದ್ರ ಗೃಹ ಸಚಿವಾಲಯ ಸೋಮವಾರ ಅನಾವರಣಗೊಳಿಸಿದೆ.

ಭೂ ವಿವಾದ ಸಂಬಂಧ ಸಹೋದರರ ಹತ್ಯೆ: ಒಂದೇ ಕುಟುಂಬದ 13 ಜನರಿಗೆ ಜೀವಾವಧಿ ಶಿಕ್ಷೆ

ಸಹರಾನ್‌ಪುರ (ಉತ್ತರಪ್ರದೇಶ): 10 ವರ್ಷಗಳ ಹಿಂದೆ ಭೂ ವಿವಾದ ಸಂಬಂಧ ಇಬ್ಬರು ಸಹೋದರರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಸ್ಥಳೀಯ ನ್ಯಾಯಾಲಯವು ಒಂದೇ ಕುಟುಂಬದ 13 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಪೋಕ್ಸೊ ಪ್ರಕರಣ: ಬಂಧಿಸಲು ಬಂದರೆ ವಿರೋಧಿಸುವುದಿಲ್ಲ– ಅವಿಮುಕ್ತೇಶ್ವರಾನಂದ ಶ್ರೀ

ವಾರಾಣಸಿ, ಉತ್ತರಪ್ರದೇಶ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ಪೊಲೀಸರು ತನ್ನನ್ನು ಬಂಧಿಸಲು ಬಂದರೆ ನಾನು ವಿರೋಧಿಸುವುದಿಲ್ಲ ಎಂದು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.

ಚಲವಾದಿ ನಾರಾಯಣಸ್ವಾಮಿ ಅಲ್ಲ, ಅವಕಾಶವಾದಿ ನಾರಾಯಣಸ್ವಾಮಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ದಲಿತತ್ವ ಇಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುತ್ತಾರೆಯೇ ಹೊರತು ದಲಿತತ್ವ ಅವರ ಕುಟುಂಬದಲ್ಲಿ ಇಲ್ಲ’ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಕ್ಕೆ ಪ್ರಿಯಾಂಕ್ ಅವರು ತಿರುಗೇಟು ನೀಡಿದ್ದಾರೆ.

ಪರಿಸರ ಮಾಲಿನ್ಯ ಖಂಡಿಸಿ ಇಂದು ಕೊಪ್ಪಳ ಬಂದ್‌: ಮುಚ್ಚಿದ ಅಂಗಡಿಗಳು, ಬಾರದ ಬಸ್‌ಗಳು

ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ಜಂಟಿ ಕ್ರಿಯಾವೇದಿಕೆ ಮಂಗಳವಾರ ಕೊಪ್ಪಳ ಹಾಗೂ ಭಾಗ್ಯನಗರ ಬಂದ್‌ ಕರೆ ನೀಡಿದ್ದು ಅಂಗಡಿಗಳು ಮುಚ್ಚಿದ್ದವು.

ಕೆಲವು ಬ್ಯಾಂಕ್‌ಗಳು ಅಗತ್ಯ ಇಲ್ಲದವರಿಗೂ ವಿಮೆ ಮಾರುತ್ತಿವೆ: ನಿರ್ಮಲಾ ಸೀತಾರಾಮನ್

ನವದೆಹಲಿ: ವಿಮೆ ಸೇರಿದಂತೆ ವಿವಿಧ ಹಣಕಾಸಿನ ಉತ್ಪನ್ನಗಳನ್ನು ಅಗತ್ಯ ಇಲ್ಲದವರಿಗೂ ಮಾರಾಟ ಮಾಡುವ ಬ್ಯಾಂಕ್‌ಗಳ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಚಾಟಿ ಬೀಸಿದರು. ಬ್ಯಾಂಕ್‌ಗಳು ತಮ್ಮ ಮೂಲ ಕೆಲಸದ ಮೇಲೆ ಗಮನ ನೀಡಬೇಕು ಎಂದು ಹೇಳಿದರು.

ಟಿ20 ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಹರ್ಮನ್‌ಪ್ರೀತ್‌ ಪಡೆಗೆ ಆಸೀಸ್ ಸವಾಲು

ಬ್ರಿಸ್ಬೇನ್‌: ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಬಾರಿ ಟಿ20 ಸರಣಿಯನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ಭಾರತ ವನಿತೆಯರ ತಂಡವು ಮಂಗಳವಾರ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ತಂಡವನ್ನು ಎದುರಿಸಲಿದೆ.

ಕಾಮನ್‌ವೆಲ್ತ್‌ ಗೇಮ್ಸ್‌: ಅರ್ಹತೆ ಗಿಟ್ಟಿಸಿಕೊಂಡ ಗುಜರಾತ್‌ನ ರೋಹಿತ್‌ ಮಜಗುಲ್‌

ಅಹಮದಾಬಾದ್‌: ಗುಜರಾತ್‌ನ ಉದಯೋನ್ಮುಖ ಜುಡೊ ಆಟಗಾರ ರೋಹಿತ್‌ ಮಜಗುಲ್‌ ಅವರು ವರ್ಷಾಂತ್ಯದಲ್ಲಿ ನಡೆಯಲಿರುವ ಕಾಮನ್‌ವೆಲ್ತ್‌ ಗೇಮ್ಸ್‌ ಹಾಗೂ ಏಷ್ಯನ್‌ ಗೇಮ್ಸ್‌ಗೆ ಅರ್ಹತೆ ಪಡೆದಿದ್ದಾರೆ.

ಐಟಿ ಷೇರುಗಳ ಮಾರಾಟ ಭರಾಟೆ, ಟ್ರಂಪ್ ಮತ್ತೊಂದು ಸುಂಕ ಬೆದರಿಕೆ: ಷೇರುಪೇಟೆ ತಲ್ಲಣ

ಮುಂಬೈ: ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಭಾರತೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ 1 ರಷ್ಟು ಕುಸಿತ ಕಂಡವು. ಎಐ ಬೆಳವಣಿಗೆ ಆತಂಕಗಳ ನಡುವೆ ಐಟಿ ಷೇರುಗಳಲ್ಲಿ ತೀವ್ರ ಮಾರಾಟ ಕುಸಿತಕ್ಕೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.