ADVERTISEMENT

ಭಾರತಕ್ಕೆ ಭೇಟಿ ನೀಡಿ ಅಭಿಯಾನಕ್ಕೆ ಚಾಲನೆ

ಪಿಟಿಐ
Published 31 ಜನವರಿ 2023, 14:37 IST
Last Updated 31 ಜನವರಿ 2023, 14:37 IST
ಜಿ.ಕೃಷ್ಣನ್ ರೆಡ್ಡಿ
ಜಿ.ಕೃಷ್ಣನ್ ರೆಡ್ಡಿ   

ನವದೆಹಲಿ: ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕೃಷ್ಣನ್ ರೆಡ್ಡಿ ಅವರು ಮಂಗಳವಾರ ‘ಭಾರತಕ್ಕೆ ಭೇಟಿ ನೀಡಿ’ (ವಿಸಿಟ್‌ ಇಂಡಿಯಾ ಇಯರ್‌ 2023) ಅಭಿಯಾನ ಮತ್ತು ಅದರ ಲಾಂಛನವನ್ನು ಅನಾವರಣಗೊಳಿಸಿದರು.

ಇದೇ ಸಂದರ್ಭದಲ್ಲಿ,‘ಜಿ 20 ಅಧ್ಯಕ್ಷತೆಯು ನಮ್ಮ ದೇಶದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಅತ್ಯುತ್ತಮ ಅವಕಾಶ ಒದಗಿಸಿದೆ’ ಎಂದು ಹೇಳಿದರು.

ಭಾರತವು ಕಳೆದ ಡಿ. 1ರಿಂದ ಜಿ 20 ಅಧ್ಯಕ್ಷತೆ ವಹಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ 55 ಕಡೆಗಳಲ್ಲಿ 200ಕ್ಕೂ ಹೆಚ್ಚು ಸಭೆಗಳು ನಡೆಯಲಿವೆ. ಸೆ.9 ಮತ್ತು 10ರಂದು ಸಮಾರೋಪ ಸಮಾರಂಭ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.