ADVERTISEMENT

ಹಿಮಾಚಲ ಪ್ರದೇಶ: ಕೇಬಲ್ ಕಾರ್‌ ಸ್ಥಗಿತ– 8 ಪ್ರವಾಸಿಗರ ರಕ್ಷಣೆಗೆ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 10:30 IST
Last Updated 20 ಜೂನ್ 2022, 10:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶಿಮ್ಲಾ: ಹಿಮಾಚಲ ಪ್ರದೇಶದ ಪರ್ವಾನೂ ಬಳಿ ತಾಂತ್ರಿಕ ದೋಷದಿಂದ ಕೇಬಲ್ ಕಾರ್‌ ಸ್ಥಗಿತಗೊಂಡಿದ್ದು, ಅದರಲ್ಲಿ 8 ಮಂದಿ ಪ್ರವಾಸಿಗರು ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ಸೋಲನ್ ಜಿಲ್ಲೆಯ ಚಂಡೀಗಢ-ಶಿಮ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟಿಂಬರ್ ಟ್ರಯಲ್‌ ರೆಸಾರ್ಟ್‌ಗೆ ಸೇರಿದ ಕೇಬಲ್ ಕಾರ್‌ಒಂದು ಗಂಟೆಗೂ ಹೆಚ್ಚು ಸಮಯದಿಂದಸಿಲುಕಿಕೊಂಡಿದೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಮತ್ತು ಪ್ರವಾಸಿಗರನ್ನು ರಕ್ಷಿಸಲು ಸೇನೆಯನ್ನು ಕರೆಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಐಎಎನ್ಎಸ್‌ಗೆ ತಿಳಿಸಿದ್ದಾರೆ.

ADVERTISEMENT

ಕೇಬಲ್ ಕಾರಿನಲ್ಲಿ ಸಿಲುಕಿರುವ ಪ್ರವಾಸಿಗರು ವಿಡಿಯೊಗಳನ್ನು ತಮ್ಮ ಕುಟುಂಬ ಸದಸ್ಯರೊಂದಿಗೆ ಹಂಚಿಕೊಂಡಿದ್ದಾರೆ. ಇಬ್ಬರು ಪ್ರವಾಸಿಗರನ್ನು ಹಗ್ಗದ ಮೂಲಕ ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಶಾಸಕ ಧನಿ ರಾಮ್ ಶಾಂಡಿಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.