ನವದೆಹಲಿ : ಮಾಜಿ ಪ್ರಧಾನಿ ಎ.ಬಿ.ವಾಜಪೇಯಿ ಅವರ ಪ್ರಥಮ ಪುಣ್ಯಸ್ಮರಣೆಯ ನಿಮಿತ್ತ ಶುಕ್ರವಾರ ಇಲ್ಲಿನ ಸ್ಮಾರಕ ‘ಸದೈವ್ ಅಟಲ್’ ಬಳಿ ಪ್ರಾರ್ಥನಾ ಸಭೆ ನಡೆಯಿತು. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ವಾಜಪೇಯಿ ಅವರ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಸ್ಮಾರಕವನ್ನು ಕಳೆದ ಡಿಸೆಂಬರ್ ತಿಂಗಳು ದೇಶಕ್ಕೆ ಸಮರ್ಪಿಸಲಾಗಿತ್ತು. ಸಮಾಧಿ 9 ಚದರ ಅಡಿ ವಿಸ್ತೀರ್ಣವಿದ್ದು, ಕಪ್ಪುಅಮೃತಶಿಲೆ ಬಳಸಲಾಗಿದೆ. ನಡುವೆ ದೀಪದ ಆಕೃತಿಯಿದೆ. ವಾಜಪೇಯಿ 2018ರ ಆಗಸ್ಟ್ 16ರಂದು ಮೃತಪಟ್ಟಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.