ಅಗರ್ತಲಾ: ತ್ರಿಪುರಾದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ದೊರೆಯಬಹುದಾದ ರಾಜಕೀಯ ನೆಲೆ ಮತ್ತು ಸಂಭಾವ್ಯ ಬೆಂಬಲದ ಬಗ್ಗೆ ಲೆಕ್ಕಾಚಾರ ಹಾಕಲು ಇಲ್ಲಿ ಹೋಟೆಲ್ವೊಂದರಲ್ಲಿ ಒಂದು ವಾರದಿಂದ ಬೀಡುಬಿಟ್ಟಿದ್ದ ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅವರ ಐಪ್ಯಾಕ್ ಸಂಘಟನೆ ಸದಸ್ಯರನ್ನು ಸ್ಥಳೀಯ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ದಿನನಿತ್ಯದ ತಪಾಸಣೆಯ ಭಾಗವಾಗಿ ಅಗರ್ತಲಾದ ಹೋಟೆಲ್ನಲ್ಲಿ 22 ಸದಸ್ಯರ ಐ-ಪ್ಯಾಕ್ ತಂಡವನ್ನು ಪ್ರಶ್ನಿಸಲಾಗುತ್ತಿದೆ ಎಂದು ಪಶ್ಚಿಮ ತ್ರಿಪುರಾದ ಪೊಲೀಸ್ ಅಧೀಕ್ಷಕ ಮಾಣಿಕ್ ದಾಸ್ ಹೇಳಿದ್ದಾರೆ.
‘ಐಪ್ಯಾಕ್ ತಂಡವು ಭಾನುವಾರ ರಾತ್ರಿಯಿಂದ ಹೋಟೆಲ್ನಲ್ಲಿ ಬಂಧನದಲ್ಲಿದೆ ಎಂದು ತ್ರಿಪುರಾ ಟಿಎಂಸಿ ರಾಜ್ಯ ಘಟಕದ ಅಧ್ಯಕ್ಷ ಆಶಿಶ್ ಲಾಲ್ ಸಿಂಗ್ ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.