ADVERTISEMENT

ತ್ರಿಪುರಾ | ಅಕ್ರಮ ಪ್ರವೇಶ: ನಾಲ್ವರು ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಪಿಟಿಐ
Published 27 ಏಪ್ರಿಲ್ 2025, 7:28 IST
Last Updated 27 ಏಪ್ರಿಲ್ 2025, 7:28 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಅಗರ್ತಲಾ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಅಗರ್ತಲಾ ರೈಲು ನಿಲ್ದಾಣದಲ್ಲಿ ಭದ್ರತಾ ಪಡೆಗಳು ಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಬಾಂಗ್ಲಾದೇಶಿ ಪ್ರಜೆಗಳ ಅಕ್ರಮ ಪ್ರವೇಶಕ್ಕೆ ಸಹಾಯ ಮಾಡಿದ್ದ ತ್ರಿಪುರಾ ಮೂಲದ ಇತರ ಐವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಶನಿವಾರ ಕೋಲ್ಕತ್ತಗೆ ಪ್ರಯಾಣಿಸುತ್ತಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಯಿತು. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆಗಾಗಿ ಮೂರು ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.