ADVERTISEMENT

ಡಿ.8ರ ‘ಭಾರತ್‌ ಬಂದ್‌’ಗೆ ಟಿಆರ್‌ಎಸ್‌ ಬೆಂಬಲ

ಪಿಟಿಐ
Published 6 ಡಿಸೆಂಬರ್ 2020, 12:52 IST
Last Updated 6 ಡಿಸೆಂಬರ್ 2020, 12:52 IST
   

ಹೈದರಾಬಾದ್‌: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಡಿ.8ರಂದು ಕರೆ ನೀಡಿರುವ ‘ಭಾರತ್‌ ಬಂದ್‌‘ಗೆ ತೆಲಂಗಾಣ ರಾಷ್ಟ್ರ ಸಮಿತಿಯು(ಟಿಆರ್‌ಎಸ್‌) ಬೆಂಬಲ ಸೂಚಿಸಿದೆ.

‘ಪಕ್ಷದ ಎಲ್ಲಾ ಸದಸ್ಯರು ಮುಷ್ಕರದಲ್ಲಿ ಭಾಗಿಯಾಗಿ, ಬಂದ್‌ ಯಶಸ್ವಿಗೊಳಿಸಲಿದ್ದಾರೆ. ರೈತರು ಕಾನೂನು ಬದ್ಧವಾಗಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಹಾಗಾಗಿ ನಮ್ಮ ಪಕ್ಷವು ಬಂದ್‌ಗೆ ಬೆಂಬಲ ಸೂಚಿಸಿದೆ’ ಎಂದು ಟಿಆರ್‌ಎಸ್‌ ಅಧ್ಯಕ್ಷ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಅವರು ತಿಳಿಸಿದ್ದಾರೆ.

‘ನಮ್ಮ ಪಕ್ಷವು ಈ ಹಿಂದೆಯೂ ಸಂಸತ್ತಿನಲ್ಲಿ ಈ ಮಸೂದೆಯನ್ನು ವಿರೋಧಿಸಿತ್ತು. ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ಹಿಂಪಡೆಯುವರೆಗೂ ಪ್ರತಿಭಟನೆ ಮುಂದುವರಿಯಬೇಕು’ ಎಂದು ಅವರು ಹೇಳಿದ್ದಾರೆ.

ADVERTISEMENT

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ವಿವಿಧ ರೈತಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಮತ್ತು ಭಾರತ್‌ ಬಂದ್‌ಗೆ ಹಲವು ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.