ADVERTISEMENT

ಶ್ರೀನಗರ: ಅಲ್‌–ಬದ್ರ್‌ ಇಬ್ಬರು ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 5:36 IST
Last Updated 28 ಏಪ್ರಿಲ್ 2022, 5:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಮಿಟ್ರಿಗಾಮ್‌ ಪ್ರದೇಶದಲ್ಲಿ ಗುರುವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಅಲ್–ಬದ್ರ್‌ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಹತರಾಗಿದ್ದಾರೆ.

‘ಹತರಾದ ಉಗ್ರರನ್ನು ಐಜಾಜ್ ಹಫೀಜ್ ಮತ್ತು ಶಾಹಿದ್ ಅಯೂಬ್ ಎಂದು ಗುರುತಿಸಲಾಗಿದ್ದು,ಈ ಇಬ್ಬರು ಅಲ್‌–ಬದ್ರ್‌ ಸಂಘಟನೆಗೆ ಸೇರಿದ್ದಾರೆ. ಉಗ್ರರಿಂದ ಎರಡು ಎಕೆ–47 ರೈಫಲ್ಸ್‌ ವಶಪಡಿಸಿಕೊಳ್ಳಲಾಗಿದೆ‘ ಎಂದು ಕಾಶ್ಮೀರ ವಲಯ ಐಜಿಪಿ ವಿಜಯಕುಮಾರ್‌ ತಿಳಿಸಿದರು.

‘ಪುಲ್ವಾಮ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿಂದ ಹೊರರಾಜ್ಯದ ಕಾರ್ಮಿಕರ ಮೇಲೆ ನಡೆದ ಸರಣಿ ದಾಳಿಯಲ್ಲಿ ಈ ಇಬ್ಬರು ಉಗ್ರರು ಭಾಗಿಯಾಗಿದ್ದರು’ ಎಂದು ಉನ್ನತ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಮಿಟ್ರಿಗಮ್‌ ಪ್ರದೇಶವನ್ನು ಬುಧವಾರ(ಏ.27) ಸುತ್ತವರೆದಿದ್ದ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಜಂಟಿ ಕಾರ್ಯಾಚರಣೆ ಆರಂಭಿಸಿತ್ತು. ಗುರುವಾರ ಮುಂಜಾನೆ ವೇಳೆಗೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.