ನವದೆಹಲಿ: ವಾಯವ್ಯ ದೆಹಲಿಯಲ್ಲಿ ಸೋಮವಾರ ಗುಂಡಿನ ಚಕಮಕಿ ನಡೆದಿದ್ದು, ‘ಬಬ್ಬರ್ ಖಸ್ಲಾ ಇಂಟರ್ನ್ಯಾಷನಲ್ (ಬಿಕೆಐ)’ ಉಗ್ರ ಸಂಘಟನೆಗೆ ಸೇರಿದ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ವಿಶೇಷ ದಳ ತಿಳಿಸಿದೆ. ಬಂಧಿತರು ಪಂಜಾಬ್ನಲ್ಲಿನ ಕೆಲವು ಪ್ರಕರಣಗಳಲ್ಲಿಯೂ ಪೊಲೀಸರಿಗೆ ಬೇಕಾಗಿದ್ದರು.
ಬಂಧಿತರನ್ನು ಭೂಪೇಂದರ್ ಅಲಿಯಾಸ್ ದಿಲ್ವಾರ್ ಸಿಂಗ್ ಮತ್ತು ಕುಲ್ವಂತ್ ಸಿಂಗ್ ಎಂದು ಗುರುತಿಸಲಾಗಿದೆ. ಇವರಿಂದ ಆರು ಪಿಸ್ತೂಲ್ಗಳು ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ವಶಡಿಸಿಕೊಳ್ಳಲಾಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.