ADVERTISEMENT

ಕೇರಳ: ಎನ್‌ಸಿಸಿ ಕ್ಯಾಂಪ್‌ನಲ್ಲಿ ಸೇನಾಧಿಕಾರಿಗಳ ಮೇಲೆ ಹಲ್ಲೆ– ಇಬ್ಬರ ಬಂಧನ

ಎನ್‌ಸಿಸಿ ಕ್ಯಾಂಪ್ ವೇಳೆ ಇಬ್ಬರು ಸೇನಾ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದ ಇಬ್ಬರನ್ನು ಕೊಚ್ಚಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಪಿಟಿಐ
Published 31 ಡಿಸೆಂಬರ್ 2024, 9:46 IST
Last Updated 31 ಡಿಸೆಂಬರ್ 2024, 9:46 IST
<div class="paragraphs"><p>ಬಂಧನ ( ಸಾಂಕೇತಿಕ ಚಿತ್ರ)</p></div>

ಬಂಧನ ( ಸಾಂಕೇತಿಕ ಚಿತ್ರ)

   

ಕೊಚ್ಚಿ (ಕೇರಳ): ಎನ್‌ಸಿಸಿ ಕ್ಯಾಂಪ್ ವೇಳೆ ಇಬ್ಬರು ಸೇನಾ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದ ಇಬ್ಬರನ್ನು ಕೊಚ್ಚಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಂಧಿತರನ್ನು ಕೊಚ್ಚಿಯ ನಿಶಾದ್ ಮತ್ತು ನವಾಜ್ ಎಂದು ಗುರುತಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನೂ ಜೈಲಿಗೆ ಕಳುಹಿಸಿದ್ದಾರೆ.

ADVERTISEMENT

ಡಿಸೆಂಬರ್ 23 ರಂದು ಕೊಚ್ಚಿಯ ಕೆಎಂಎಂ ಕಾಲೇಜು ಕ್ಯಾಂಪಸ್‌ನಲ್ಲಿ ಎನ್‌ಸಿಸಿ 21 ಕೇರಳ ಬೆಟಾಲಿಯನ್‌ನ ವಾರ್ಷಿಕ ತರಬೇತಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಅದೇ ದಿನ ಊಟ ಮಾಡಿದ್ದ 60 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.

ಈ ವಿಷಯ ತಿಳಿದು ಕ್ಯಾಂಪ್‌ಗೆ ಸಂಬಂಧ ಇಲ್ಲದ ನಿಶಾದ್ ಮತ್ತು ನವಾಜ್ ಎನ್ನುವರು ಲೆಫ್ಟಿನಂಟ್ ಕರ್ನಲ್ ಕರ್ನೇಯಿಲ್ ಸಿಂಗ್ ಹಾಗೂ ಬೆಟಾಲಿಯನ್‌ನ ಆಡಳಿತಾಧಿಕಾರಿ ಮೇಲೆ ಹಲ್ಲೆ ಮಾಡಿದ್ದರು. ಚಾಕು ತೋರಿಸಿ ಬೆದರಿಕೆ ಹಾಕಿದ್ದರು ಎಂದು ದೂರಲಾಗಿತ್ತು.

ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಾಪತ್ತೆಯಾಗಿದ್ದ ಇಬ್ಬರನ್ನೂ ಬಂಧಿಸಿ ಕ್ರಮ ಜರುಗಿಸಿದ್ದಾರೆ. ಬಂಧಿತರ ವಿರುದ್ಧ ಬಿಎನ್‌ಎಸ್ ವಿವಿಧ ಪ್ರಕರಣಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.