ADVERTISEMENT

ನೇತ್ರಾವತಿ ಎಕ್ಸ್‌ಪ್ರೆಸ್‌ ಸೇರಿ 2 ರೈಲುಗಳಿಗೆ ಕೇರಳದಲ್ಲಿ ಕಲ್ಲು ತೂರಾಟ

ಪಿಟಿಐ
Published 14 ಆಗಸ್ಟ್ 2023, 6:59 IST
Last Updated 14 ಆಗಸ್ಟ್ 2023, 6:59 IST
ರೈಲು (ಪ್ರಾತಿನಿಧಿಕ ಚಿತ್ರ)
ರೈಲು (ಪ್ರಾತಿನಿಧಿಕ ಚಿತ್ರ)   

ಕಣ್ಣೂರು: ಎರಡು ರೈಲುಗಳಿಗೆ ಕಲ್ಲು ತೂರಿದ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು–ಚೆನ್ನೈ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಹಾಗೂ ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಕಣ್ಣೂರು ದಕ್ಷಿಣ ಹಾಗೂ ವಳಪಟ್ಟಣಂ ನಡುವೆ ರೈಲುಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಮಾಹಿತಿ ಲಭಿಸಿದೆ.

ಸಂಜೆ 7.10 ರಿಂದ 7.30ರ ನಡುವಣ 20 ನಿಮಿಷದ ಅವಧಿಯಲ್ಲಿ ಕೃತ್ಯ ಸಂಭವಿಸಿದೆ. ಎರಡೂ ರೈಲುಗಳ ಹವಾನಿಯಂತ್ರಿತ ಬೋಗಿಯ ಗಾಜುಗಳು ಒಡೆದಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯ ಉಂಟಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಭಾನುವಾರ ರಾತ್ರಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ರೈಲ್ವೆ ಪೊಲೀಸರು 4 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿಂದಿನ ಉದ್ದೇಶ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.