ADVERTISEMENT

ಸಿಂಘು ಗಡಿಯಲ್ಲಿ ಕರ್ತವ್ಯ ನಿರತ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೋವಿಡ್ ಸೋಂಕು

ಏಜೆನ್ಸೀಸ್
Published 11 ಡಿಸೆಂಬರ್ 2020, 7:40 IST
Last Updated 11 ಡಿಸೆಂಬರ್ 2020, 7:40 IST
ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆ (ಪಿಟಿಐ)
ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆ (ಪಿಟಿಐ)   

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಹಾಗೂ ಹರಿಯಾಣ ಗಡಿ ಪ್ರದೇಶಗಳಲ್ಲಿ ವ್ಯಾಪಕ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ಮಧ್ಯೆ ಸಿಂಘು ಗಡಿ ಪ್ರದೇಶದಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಗೊಂಡಿದೆ. ಇದರಿಂದ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿರಬಹುದೇ ಎಂಬುದು ಆತಂಕ ಸೃಷ್ಟಿಯಾಗಿದೆ.

ದೆಹಲಿ ಪೊಲೀಸ್ ನೀಡಿರುವ ಮಾಹಿತಿ ಪ್ರಕಾರ, ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇವರನ್ನು ಹೋಮ್ ಕ್ವಾರಂಟೈನ್‌ಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ.

ADVERTISEMENT

ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು 16ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ, ದೇಶದಾದ್ಯಂತ ರೈಲು ಸಂಚಾರಕ್ಕೆ ಅಡ್ಡಿ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ರೈತ ಮುಖಂಡರು ಯೋಜನೆಯಿರಿಸಿದ್ದಾರೆ. ದೆಹಲಿ, ಹರಿಯಾಣಕ್ಕಷ್ಟೇ ಸೀಮಿತಗೊಳ್ಳದೆ ದೇಶವ್ಯಾಪಿ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.