ADVERTISEMENT

ಶ್ರೀನಗರ: ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್ ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 10:32 IST
Last Updated 30 ಸೆಪ್ಟೆಂಬರ್ 2022, 10:32 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್‌ ಎ ಮೊಹಮದ್‌ (ಜೆಇಎಂ) ನ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೋಪಿಯಾನ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಗಿನ ಜಾವ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎರಡು ಎನ್‌ಕೌಂಟರ್ ನಡೆದಿದೆ.ಶೋಪಿಯಾನ್‌ನ ಚಿತ್ರಗಾಮ್ ಪ್ರದೇಶ ಮತ್ತು ಬಾರಾಮುಲ್ಲಾದ ಪಟ್ಟನ್‌ನ ಯಡಿಪೋರಾ ಪ್ರದೇಶದಲ್ಲಿ ಭದ್ರತಾ ಪ‍ಡೆಗಳು ಶೋಧ ಕಾರ್ಯ ನಡೆಸುವಾಗ ಎನ್‌ಕೌಂಟರ್‌ ಶುರುವಾಗಿದೆ ಎಂದು ಅವರು ಹೇಳಿದರು.

ಬಾರಾಮುಲ್ಲಾ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.