ADVERTISEMENT

ತಿರುವನಂತಪುರ | ಆನೆಗಳ ದಿಕ್ಕಾಪಾಲು ಓಡಾಟ: ಇಬ್ಬರು ಸಾವು, ಐವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2025, 15:46 IST
Last Updated 13 ಫೆಬ್ರುವರಿ 2025, 15:46 IST
   

ತಿರುವನಂತಪುರ: ಕೋಯಿಕ್ಕೋಡ್‌ನ ಕೊಯಿಲಾಂಡಿಯ ದೇಗುಲದಲ್ಲಿ ಗುರುವಾರ ಉತ್ಸವದ ವೇಳೆ ಎರಡು ಆನೆಗಳು ದಿಕ್ಕಾಪಾಲಾಗಿ ಓಡಿದ್ದು, ಅದರಿಂದ ಚದುರಿದ ಗುಂಪುಗೂಡಿದ್ದವರ ಕಾಲ್ತುಳಿತದಿಂದಾಗಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. 

ಇಲ್ಲಿನ ಮಣಕುಳಂಗರ ದೇವಸ್ಥಾನದ ಆವರಣದಲ್ಲಿ ಈ ಅವಘಡ ಸಂಭವಿಸಿದೆ. ಉದ್ರಿಕ್ತ ಆನೆಗಳ ಕಂಡು ಜನರು ಓಡಿದ್ದರಿಂದ ಐವರು ಗಾಯಗೊಂಡರು. ಅವರ ಸ್ಥಿತಿ ಗಂಭೀರವಾಗಿದೆ.

ವರದಿಗಳ ಪ್ರಕಾರ, ರೋಷಗೊಂಡ ಆನೆಯು ಮತ್ತೊಂದು ಆನೆಯ ಮೇಲೆ ದಾಳಿ ನಡೆಸಿದೆ. ಆಗ ಎರಡೂ ಆನೆಗಳು ಜನರ ಗುಂಪಿನ ನಡುವೆ ಓಡಾಡಿದ್ದು, ನೂಕುನುಗ್ಗಲಿಗೆ ಕಾರಣವಾಯಿತು.  30 ನಿಮಿಷದ ಬಳಿಕ ಆನೆಗಳು ಸಹಜ ಸ್ಥಿತಿಗೆ ಮರಳಿದ್ದು, ಪರಿಸ್ಥಿತಿ ತಿಳಿಯಾಯಿತು. ಆನೆ ದಾಳಿಯಿಂದ ಗೋಡೆಯೊಂದು ಕುಸಿದಿದೆ.

ADVERTISEMENT

ಕಳೆದ ವಾರ ರಾಜ್ಯದಲ್ಲಿ ಇಂತದೇ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಸತ್ತಿದ್ದರು. ಉತ್ಸವಗಳಲ್ಲಿ ಆನೆಗಳ ಬಳಕೆ ಕುರಿತು ಕಠಿಣ ನಿಯಮಗಳನ್ನು ಹೈಕೋರ್ಟ್ ಹೇರಿತ್ತು. ಆದರೆ, ಉತ್ಸವಗಳ ಆಯೋಜಕರು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಇದಕ್ಕೆ ತಡೆಯಾಜ್ಞೆ ತಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.