ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನಾ ಶಿಬಿರದ ಬಳಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ನಾಗರಿಕರಿಬ್ಬರು ಮೃತಪಟ್ಟಿದ್ದಾರೆ.
ಪೊಲೀಸರು, ರಕ್ಷಣಾ ಸಿಬ್ಬಂದಿ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನಾ ಶಿಬಿರದ ಬಳಿ ಉಗ್ರರುಬೆಳ್ಳಂಬೆಳಗ್ಗೆ ಗುಂಡಿನ ದಾಳಿನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಪೊಲೀಸರು, ರಕ್ಷಣಾ ಪಡೆಗಳು ಮತ್ತು ನಾಗರಿಕ ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ' ಎಂದು ಸೇನಾ ಘಟಕ 'ವೈಟ್ ನೈಟ್ ಕಾಪ್ಸ್' ಟ್ವಿಟರ್ನಲ್ಲಿ ಮಾಹಿತಿ ನೀಡಿದೆ.
ಈ ಹಿಂದೆ ಶಿಬಿರದ ಕಾವಲು ಸಿಬ್ಬಂದಿ ಅಚಾನಕ್ಕಾಗಿ ಗುಂಡು ಹಾರಿಸಿದ್ದಾರೆ ಎಂದು ಸೇನೆ ಹೇಳಿತ್ತು. ಬಳಿಕ, ಇದು ಭಯೋತ್ಪಾದಕರ ಕೃತ್ಯ ಎಂದು ಅದು ಹೇಳಿದೆ. ನಾಗರಿಕರ ಹತ್ಯೆ ಖಂಡಿಸಿ ಸ್ಥಳಿಯರು ಪ್ರತಿಭಟನೆ ನಡೆಸಿದ್ದು, ಸೇನಾ ಶಿಬಿರದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.