ADVERTISEMENT

ಕೇರಳ ಮಾದರಿ ಚಿನ್ನ ಕಳ್ಳಸಾಗಣೆ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ಏಜೆನ್ಸೀಸ್
Published 6 ಆಗಸ್ಟ್ 2020, 14:30 IST
Last Updated 6 ಆಗಸ್ಟ್ 2020, 14:30 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಚಿನ್ನ ಕಳ್ಳಸಾಗಣೆಯಲ್ಲಿ ತೊಡಗಿದ್ದ ಇಬ್ಬರನ್ನು ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಆರೋಪಿಗಳಿಂದ ₹26 ಲಕ್ಷ ಮೌಲ್ಯದ ಚಿನ್ನವನ್ನು ಗುರುವಾರ ವಶಪಡಿಸಿಕೊಂಡಿದ್ದಾರೆ.

ಬಂಧಿತರು ಸೌದಿ ಅರೇಬಿಯಾ ರಾಜಧಾನಿ ರಿಯಾದ್‌ನಿಂದ ಮರಳಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಗುರುವಾರ ಮುಂಜಾನೆ ಈ ಕಾರ್ಯಾಚರಣೆ ನಡೆಸಿದ್ದೇವೆ. ₹ 26 ಲಕ್ಷ ಮೌಲ್ಯದ 466 ಗ್ರಾಂ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದೇವೆ. ಆರೋಪಿಗಳು ರಿಯಾದ್‌ನಿಂದ ಭಾರತಕ್ಕೆ ಮರಳಿದ್ದರು' ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ADVERTISEMENT

ಬಂಧಿತರಿಬ್ಬರೂ ರಾಜಸ್ಥಾನ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.

ಇದೇ ಮಾದರಿ ಪ್ರಕರಣವು ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಕಳೆದ ತಿಂಗಳು ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.