ADVERTISEMENT

ದೆಹಲಿ: ಆಯತಪ್ಪಿ ಕಾಲುವೆಗೆ ಬಿದ್ದ ಬೈಕ್ ಸವಾರರು; ಮುಂದುವರಿದ ಶೋಧ ಕಾರ್ಯಾಚರಣೆ

ಐಎಎನ್ಎಸ್
Published 20 ಮಾರ್ಚ್ 2023, 9:55 IST
Last Updated 20 ಮಾರ್ಚ್ 2023, 9:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಬ್ಬರು ವ್ಯಕ್ತಿಗಳು ತಮ್ಮ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆಯತಪ್ಪಿ(ಸ್ಕಿಡ್) ಕಾಲುವೆಗೆ ಬಿದ್ದಿರುವ ಘಟನೆ ದೆಹಲಿಯ ಆಗ್ನೀಯ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಮಧ್ಯರಾತ್ರಿಯ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಕಾಲುವೆಯಲ್ಲಿ ಬಿದ್ದಿರುವ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ದೆಹಲಿ-ಗುರುಗ್ರಾಮ್ ಕಾಲುವೆಯಲ್ಲಿ ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಂತ್ರಸ್ತರನ್ನು ಮೊಲಾರ್‌ಬಂಡ್ ಎಕ್ಸ್‌ಟಿಎನ್‌ನ ನಿವಾಸಿಗಳಾದ ರಾಹುಲ್ (32) ಮತ್ತು ಹೇಮೇಂದ್ರ ಸಿಂಗ್ (30) ಎಂದು ಗುರುತಿಸಲಾಗಿದೆ.

ADVERTISEMENT

ಇಲ್ಲಿನ ಬದರ್‌ಪುರದ ಅಟಲ್ ಪಾರ್ಕ್ ಎದುರು ದೆಹಲಿ-ಗುರುಗ್ರಾಮ್ ಕಾಲುವೆಯ ಬಳಿ ಬೈಕ್ ಅಪಘಾತದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಂದು ಪೊಲೀಸ್ ಉಪ ಆಯುಕ್ತ (ಆಗ್ನೇಯ) ರಾಜೇಶ್ ಡಿಯೋ ಹೇಳಿದ್ದಾರೆ.

ಅಪರಾಧ ತಂಡ, ಅಗ್ನಿಶಾಮಕ ದಳ, ವಿಪತ್ತು ನಿರ್ವಹಣಾ ತಂಡ, ಈಜುಗಾರರು ಸೇರಿದಂತೆ ಆಂಬ್ಯುಲೆನ್ಸ್ ಸ್ಥಳದಲ್ಲಿಯೇ ಇದ್ದು, ಸಂತ್ರಸ್ತರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ರಾಜೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.